ವಿಚಾರ ಸಂಕಿರಣ  
ರಾಜ್ಯ

ಬೆಂಗಳೂರು: "ಬಾಹ್ಯಾಕಾಶಕ್ಕಾಗಿ ಯೋಗ": ವಿಚಾರ ಸಂಕಿರಣ

ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದಲ್ಲಿ 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜೊತೆಗೆ "ವೈಯಕ್ತಿಕ ಮತ್ತು ಸಮಾಜಕ್ಕಾಗಿ ಯೋಗ" ಎಂಬ ವಿಷಯದೊಂದಿಗೆ “ಬಾಹ್ಯಾಕಾಶಕ್ಕಾಗಿ ಯೋಗ" ಕುರಿತಾದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ಬೆಂಗಳೂರು: ನಗರದ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದಲ್ಲಿ 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜೊತೆಗೆ "ವೈಯಕ್ತಿಕ ಮತ್ತು ಸಮಾಜಕ್ಕಾಗಿ ಯೋಗ" ಎಂಬ ವಿಷಯದೊಂದಿಗೆ “ಬಾಹ್ಯಾಕಾಶಕ್ಕಾಗಿ ಯೋಗ" ಕುರಿತಾದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಇದು ಗಗನಯಾತ್ರಿಗಳು ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳ ತಜ್ಞರ ಒಮ್ಮುಖ ಪ್ರಯತ್ನಗಳ ಮೇಲೆ ಕೇಂದ್ರೀಕೃತವಾಗಿತ್ತು.

ಎಸ್-ವ್ಯಾಸ ವಿಶ್ವವಿದ್ಯಾಲಯ ಸಂಸ್ಥಾಪಕರಾದ ಡಾ. ಎಚ್.ಆರ್ ನಾಗೇಂದ್ರ ಮಾತನಾಡಿ, ನಾಸಾದಿಂದ ವ್ಯಾಸ (ಎಸ್-ವ್ಯಾಸ) ಬೆಳವಣಿಗೆಯವರೆಗಿನ ಪ್ರಯಾಣವನ್ನು ವಿವರಿಸಿದರು. ದೆಹಲಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಕೇಂದ್ರೀಯ ಮಂಡಳಿಯ ನಿರ್ದೇಶಕ ಡಾ. ರಾಘವೇಂದ್ರ ರಾವ್, ಎಸ್-ವ್ಯಾಸ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಆರ್. ರಾಮಕೃಷ್ಣನ್ ಅವರು ವಿಷಯ ಮಂಡಿಸಿದರು.

ಬೆಂಗಳೂರಿನ ನಿಮ್ಹಾನ್ಸ್‌ನ ನ್ಯೂರೋಫಿಸಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಟಿ.ಎನ್. ಸತ್ಯಪ್ರಭಾ ಅವರ ಅಧ್ಯಕ್ಷತೆಯಲ್ಲಿ ಇಸ್ರೋದ ಉಪನಿರ್ದೇಶಕರಾದ ಡಾ.ಸಿ ಗೀತೈಕೃಷ್ಣನ್ ಅವರು "ಗಗನಯಾನ - ಮಿಷನ್ ಮತ್ತು ಸಿಬ್ಬಂದಿ ಸುರಕ್ಷತೆ" ಕುರಿತು ವಿಷಯ ಮಂಡಿಸಿದರು. ಡಾ. ಕೆ.ಕೆ ದೀಪಕ್ ಅವರು ಬಾಹ್ಯಾಕಾಶ ಸಂಶೋಧನೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಎಸ್ ವ್ಯಾಸ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎನ್.ಕೆ. ಮಂಜುನಾಥ್ ನಿಮ್ಹಾನ್ಸ್ ನ ಮನಃಶಾಸ್ತ್ರ ಪ್ರೊ. ಡಾ. ಶಿವರಾಮ ವಾರಂಬಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT