ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರ: ಪುನಶ್ಚೇತನಕ್ಕೆ ಅಂತಾರಾಷ್ಟ್ರೀಯ ಬ್ಯಾಂಕ್‌ಗಳ ಒತ್ತಾಯ

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (ಬಿಎಸ್‌ಆರ್‌ಪಿ) ಧನಸಹಾಯ ನೀಡುತ್ತಿರುವ ಅಂತರರಾಷ್ಟ್ರೀಯ ಬ್ಯಾಂಕ್‌ಗಳು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಪುನಶ್ಚೇತನಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿವೆ.

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (ಬಿಎಸ್‌ಆರ್‌ಪಿ) ಧನಸಹಾಯ ನೀಡುತ್ತಿರುವ ಅಂತರರಾಷ್ಟ್ರೀಯ ಬ್ಯಾಂಕ್‌ಗಳು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಪುನಶ್ಚೇತನಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿವೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ ಸಾಲಕ್ಕೆ ಅನುಕೂಲವಾಗುವಂತೆ ಕೆ- ರೈಡ್ ಯೋಜನಾ ಪರಾಮರ್ಶೆ ವೇಳೆಯಲ್ಲಿ ಯುರೋಪಿಯನ್ ಹೂಡಿಕೆ ಬ್ಯಾಂಕ್ ಮತ್ತು ಕೆಎಫ್ ಡಬ್ಲ್ಯೂ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಸಲಹೆ ಕೇಳಿಬಂದಿದೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆ ಸಂಪೂರ್ಣ ಸಾಮರ್ಥ್ಯ ಪಡೆಯಲು ಸಹಾಯ ಮಾಡಲು ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂದು ಯೂರೋಪಿಯನ್ ಹೂಡಿಕೆ ಬ್ಯಾಂಕ್ ಅಧಿಕಾರಿ ಏಂಜೆಲಿಕಿ ಕೊಪ್ಸಚೆಲ್ಲಿ ಪ್ರತಿಪಾದಿಸಿದರು. ನಗರದಲ್ಲಿ ಸುಗಮ ಸಂಚಾರಕ್ಕಾಗಿ ಮೆಟ್ರೋ ರೈಲು, ಸಿಟಿ ಬಸ್ ಸೇವೆ ಮತ್ತು ಬೆಂಗಳೂರು ಉಪನಗರ ರೈಲು ಯೋಜನೆ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಬ್ಯಾಂಕರ್ ಗಳು ಬಯಸಿದ್ದಾರೆ.

ಅಂತಾರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳು, ಕೇಂದ್ರೀಯ ವಿದ್ಯಾಲಯ, ಮತ್ತಿಕೆರೆ, ಜಯರಾಮ್ ಸ್ಲಂ ಕಾಲೋನಿ ಮತ್ತು ಬೆನ್ನಿಗಾನಹಳ್ಳಿ ನಿಲ್ದಾಣದಲ್ಲಿ ಬಿಎಸ್‌ಆರ್‌ಪಿ ನಿರ್ಮಾಣ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಯೂರೋಪಿಯನ್ ಹೂಡಿಕೆ ಬ್ಯಾಂಕ್ ಮತ್ತು ಕೆಎಫ್ ಡಬ್ಲ್ಯೂ ಅಭಿವೃದ್ಧಿ ಬ್ಯಾಂಕ್ ಅಧಿಕಾರಿಗಳ ತಂಡ ರಾಜ್ಯದ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ ತಮ್ಮ ಪರಿಶೀಲನಾ ಸಂಶೋಧನೆಗಳ ಬಗ್ಗೆ ವಿವರಿಸಿದರು. ಬೆಂಗಳೂರು ಉಪನಗರ ರೈಲು ಯೋಜನೆ 148 ಕಿಲೋಮೀಟರ್ ನೆಟ್‌ವರ್ಕ್‌ನೊಂದಿಗೆ ದೇಶದಲ್ಲಿಯೇ ಮೊದಲನೆಯದು ಮತ್ತು ದೇಶದ ಇತರ ಎಲ್ಲಾ ಉಪನಗರ ಯೋಜನೆಗಳಿಗೆ ಮಾನದಂಡವನ್ನು ಹೊಂದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಚಿವರು ಅವರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!