ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರ: ಪುನಶ್ಚೇತನಕ್ಕೆ ಅಂತಾರಾಷ್ಟ್ರೀಯ ಬ್ಯಾಂಕ್‌ಗಳ ಒತ್ತಾಯ

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (ಬಿಎಸ್‌ಆರ್‌ಪಿ) ಧನಸಹಾಯ ನೀಡುತ್ತಿರುವ ಅಂತರರಾಷ್ಟ್ರೀಯ ಬ್ಯಾಂಕ್‌ಗಳು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಪುನಶ್ಚೇತನಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿವೆ.

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (ಬಿಎಸ್‌ಆರ್‌ಪಿ) ಧನಸಹಾಯ ನೀಡುತ್ತಿರುವ ಅಂತರರಾಷ್ಟ್ರೀಯ ಬ್ಯಾಂಕ್‌ಗಳು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಪುನಶ್ಚೇತನಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿವೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ ಸಾಲಕ್ಕೆ ಅನುಕೂಲವಾಗುವಂತೆ ಕೆ- ರೈಡ್ ಯೋಜನಾ ಪರಾಮರ್ಶೆ ವೇಳೆಯಲ್ಲಿ ಯುರೋಪಿಯನ್ ಹೂಡಿಕೆ ಬ್ಯಾಂಕ್ ಮತ್ತು ಕೆಎಫ್ ಡಬ್ಲ್ಯೂ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಸಲಹೆ ಕೇಳಿಬಂದಿದೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆ ಸಂಪೂರ್ಣ ಸಾಮರ್ಥ್ಯ ಪಡೆಯಲು ಸಹಾಯ ಮಾಡಲು ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂದು ಯೂರೋಪಿಯನ್ ಹೂಡಿಕೆ ಬ್ಯಾಂಕ್ ಅಧಿಕಾರಿ ಏಂಜೆಲಿಕಿ ಕೊಪ್ಸಚೆಲ್ಲಿ ಪ್ರತಿಪಾದಿಸಿದರು. ನಗರದಲ್ಲಿ ಸುಗಮ ಸಂಚಾರಕ್ಕಾಗಿ ಮೆಟ್ರೋ ರೈಲು, ಸಿಟಿ ಬಸ್ ಸೇವೆ ಮತ್ತು ಬೆಂಗಳೂರು ಉಪನಗರ ರೈಲು ಯೋಜನೆ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಬ್ಯಾಂಕರ್ ಗಳು ಬಯಸಿದ್ದಾರೆ.

ಅಂತಾರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳು, ಕೇಂದ್ರೀಯ ವಿದ್ಯಾಲಯ, ಮತ್ತಿಕೆರೆ, ಜಯರಾಮ್ ಸ್ಲಂ ಕಾಲೋನಿ ಮತ್ತು ಬೆನ್ನಿಗಾನಹಳ್ಳಿ ನಿಲ್ದಾಣದಲ್ಲಿ ಬಿಎಸ್‌ಆರ್‌ಪಿ ನಿರ್ಮಾಣ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಯೂರೋಪಿಯನ್ ಹೂಡಿಕೆ ಬ್ಯಾಂಕ್ ಮತ್ತು ಕೆಎಫ್ ಡಬ್ಲ್ಯೂ ಅಭಿವೃದ್ಧಿ ಬ್ಯಾಂಕ್ ಅಧಿಕಾರಿಗಳ ತಂಡ ರಾಜ್ಯದ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ ತಮ್ಮ ಪರಿಶೀಲನಾ ಸಂಶೋಧನೆಗಳ ಬಗ್ಗೆ ವಿವರಿಸಿದರು. ಬೆಂಗಳೂರು ಉಪನಗರ ರೈಲು ಯೋಜನೆ 148 ಕಿಲೋಮೀಟರ್ ನೆಟ್‌ವರ್ಕ್‌ನೊಂದಿಗೆ ದೇಶದಲ್ಲಿಯೇ ಮೊದಲನೆಯದು ಮತ್ತು ದೇಶದ ಇತರ ಎಲ್ಲಾ ಉಪನಗರ ಯೋಜನೆಗಳಿಗೆ ಮಾನದಂಡವನ್ನು ಹೊಂದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಚಿವರು ಅವರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT