ಸಚಿವ ಸುರೇಶ್ ಗೋಪಿ 
ರಾಜ್ಯ

ISRO ಮುಖ್ಯಸ್ಥ ಸೋಮನಾಥ್ ಭೇಟಿ ಮಾಡಿದ ಸುರೇಶ್ ಗೋಪಿ: ಕೇರಳ ಪ್ರವಾಹ- ತಗ್ಗಿಸುವ ಯೋಜನೆ ಬಗ್ಗೆ ಚರ್ಚೆ

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಜೂನ್ 18 ರಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಸೋಮನಾಥ್ ಎಸ್ ಅವರನ್ನು ಭೇಟಿ ಮಾಡಿದರು.

ಬೆಂಗಳೂರು: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಜೂನ್ 18 ರಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಸೋಮನಾಥ್ ಎಸ್ ಅವರನ್ನು ಭೇಟಿ ಮಾಡಿದರು.

ಈ ವೇಳೆ ಕೇರಳದ ಇಡುಕ್ಕಿ ಅಣೆಕಟ್ಟು ಮತ್ತ ಮುಲ್ಲಪೆರಿಯಾರ್ ಪ್ರವಾಹದ ಅಪಾಯವನ್ನು ವಿಶ್ಲೇಷಿಸಲು ಬಾಹ್ಯಾಕಾಶ ತಂತ್ರಜ್ಞಾನ ಆಧಾರಿತ ಬಳಕೆ ಬಗ್ಗೆ ಚರ್ಚಿಸಿದರು. ಪ್ರವಾಸೋದ್ಯಮ ರಾಜ್ಯ ಸಚಿವರೂ ಆಗಿರುವ ಗೋಪಿ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿ, ಈ ಅಣೆಕಟ್ಟುಗಳಿಗೆ ಸಂಬಂಧಿಸಿದ ಅತ್ಯಂತ ಕೆಟ್ಟ ಪ್ರವಾಹ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.

ಬುಧವಾರದಂದು ಇಸ್ರೋ ಹೊರಡಿಸಿದ ಪ್ರಕಟಣೆಯ ಪ್ರಕಾರ, ಸಂಭವನೀಯ ಪ್ರವಾಹವನ್ನು ನಿರ್ಣಯಿಸಲು ಮತ್ತು ಸಂಭಾವ್ಯ ಪ್ರದೇಶಗಳನ್ನು ಗುರುತಿಸಲು ಪ್ರವಾಹ ಸಂಶೋಧನೆಯಲ್ಲಿ ತೊಡಗಿರುವ ಸಂಶೋಧಕರಿಗೆ ಹೆಚ್ಚಿನ ಭೂಪ್ರದೇಶದ ಡೇಟಾದಂತಹ ಬಾಹ್ಯಾಕಾಶ ಆಧಾರಿತ ಇನ್‌ಪುಟ್‌ಗಳು ಲಭ್ಯವಾಗುವಂತೆ ಮಾಡಲು ಸೋಮನಾಥ್ ಎಲ್ಲಾ ಬೆಂಬಲವನ್ನು ಭರವಸೆ ನೀಡಿದರು.

ಉಪಗ್ರಹ ಸಂವಹನ ಸಾಮರ್ಥ್ಯಗಳ ಜೊತೆಗೆ ಪಾರುಗಾಣಿಕಾ ಮತ್ತು ಪುನರ್ವಸತಿ ಯೋಜನೆಯೊಂದಿಗೆ ಪ್ರವಾಹ ಅಪಾಯವನ್ನು ಸಂಯೋಜಿಸುವ ಮೂಲಮಾದರಿಯ ಪರಿಹಾರವನ್ನು ಅಭಿವೃದ್ಧಿಪಡಿಸಲು ಅವರು ಸಲಹೆ ನೀಡಿದರು. ವಿಪತ್ತು ನಿರ್ವಹಣೆಗೆ ಬಾಹ್ಯಾಕಾಶ ಆಧಾರಿತ ಬೆಂಬಲದ ಪಾತ್ರದ ಕುರಿತು ಸಾಮರ್ಥ್ಯದ ನಿರ್ಮಾಣವನ್ನು ಸಹ ಸೂಚಿಸಲಾಗಿದೆ.

ಪ್ರತಿಯೊಂದು ಜಲಾನಯನ ಪ್ರದೇಶವು ವಿಭಿನ್ನವಾಗಿರುವುದರಿಂದ ಪ್ರತ್ಯೇಕ ಮಾದರಿಗಳನ್ನು ಸಿದ್ಧಪಡಿಸಬೇಕಾಗುತ್ತದೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ಪರಿಹಾರಗಳು ವಿಭಿನ್ನವಾಗಿರಬೇಕು. ಇಸ್ರೋ ಎಲ್ಲಾ ಸ್ಥಳಗಳಿಗೂ ಇದನ್ನು ಮಾಡಲು ಸಮರ್ಥವಾಗಿದೆ. ಪ್ರಸ್ತುತ ಸ್ಥಳಗಳ ಮಾದರಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಈ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT