ಶಾಸಕ ಉದಯ್ ಗೌಡ-ನಟ ದರ್ಶನ್ 
ರಾಜ್ಯ

ನಟ ದರ್ಶನ್ ಕೋಪಿಷ್ಠ ಹೌದು, ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ: ಕಾಂಗ್ರೆಸ್ ಶಾಸಕ ಉದಯ್ ಗೌಡ ಸಮರ್ಥನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಚಾಲೆಂಜಿಂಗ್ ನಟ ದರ್ಶನ್​ ಕೃತ್ಯವನ್ನು ಕಾಂಗ್ರೆಸ್ ಶಾಸಕ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಚಾಲೆಂಜಿಂಗ್ ನಟ ದರ್ಶನ್​ ಕೃತ್ಯವನ್ನು ಕಾಂಗ್ರೆಸ್ ಶಾಸಕ ಸಮರ್ಥಿಸಿಕೊಂಡಿದ್ದಾರೆ.

ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಉದಯ್ ಗೌಡ ಅವರು, ನಟ ದರ್ಶನ್ ಸ್ವಲ್ಪ ‌ಮುಂಗೋಪ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದು ಹೇಳಿದ್ದಾರೆ. ದರ್ಶನ್ ನನಗೆ ಹಲವು ವರ್ಷಗಳಿಂದ ಸ್ನೇಹಿತ. ಆದರೆ ಈ ರೀತಿ ದರ್ಶನ್ ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆಯನ್ನು ದರ್ಶನ್ ಜೊತೆಗಿರುವವರು ಮಾಡಿದ್ರಾ? ಆ ಕೊಲೆಯನ್ನು ಇವರ ಮೇಲೆ ಏನಾದ್ರೂ‌ ಹಾಕಿದ್ರಾ ಗೊತ್ತಿಲ್ಲ?. ತನಿಖೆಯಿಂದ ಎಲ್ಲವೂ ಹೊರಗೆ ಬರಬೇಕು. ನಾನು ಈಗಲೇ ಏನನ್ನೂ‌ ಹೇಳೋಕೆ ಆಗಲ್ಲ ಎಂದು ಉದಯ್ ಗೌಡ ಹೇಳಿದ್ದಾರೆ.

ನಿನ್ನೆ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಎಲ್ಲಾ 17 ಆರೋಪಿಗಳನ್ನು ಹಾಜರುಪಡಿಸಲಾಗಿದ್ದು ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರ 13 ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT