ರೋಹಿಣಿ ಸಿಂಧೂರಿ 
ರಾಜ್ಯ

ಭೂ ಕಬಳಿಕೆ ಆರೋಪ: IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು!

ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ಭೂಕಬಳಿಕೆ ದೂರು ದಾಖಲಾಗಿದೆ.

ಬೆಂಗಳೂರು: ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ಭೂಕಬಳಿಕೆ ದೂರು ದಾಖಲಾಗಿದೆ.

ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ (Bollywood Singer Lucky Ali) ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(IAS officer Rohini Sindhuri) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮೂಲಗಳ ಪ್ರಕಾರ ಬೆಂಗಳೂರಿನ (Bengaluru) ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ (Land grabbing) ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ.

ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದು, ಜೊತೆಗೆ ಈ ಸಂಬಂಧ ತಮ್ಮ ಟ್ವೀಟರ್​ ಖಾತೆಯಲ್ಲಿ ದೂರಿನ ಪ್ರತಿಯನ್ನು ಶೇರ್ ಮಾಡಿಕೊಂಡಿದ್ದಾರೆ.

ಈ ಹಿಂದೆಯೂ ದೂರು ನೀಡಿದ್ದ ಗಾಯಕ

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಅವರು, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.

ಅಲ್ಲದೇ ಅಂದಿನ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರಿಗೆ ಟ್ಯಾಗ್ ಮಾಡಿದ್ದರು. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ.

ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜೊತೆಗೆ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT