ಬಿಜೆಪಿ ಪ್ರತಿಭಟನೆ 
ರಾಜ್ಯ

ಅಧಿಕಾರಕ್ಕೆ ಬಂದ ವರ್ಷದೊಳಗೆ ರಾಜ್ಯದಲ್ಲಿ ತೆರಿಗೆ ಪರ್ವ-ಬೆಲೆ ಏರಿಕೆ ಪರ್ವ ಶುರುವಾಗಿದೆ: ಕಾಂಗ್ರೆಸ್ ವಿರುದ್ದ ಬಿಜೆಪಿ ವಾಗ್ದಾಳಿ

ಮುದ್ರಾಂಕ ಶುಲ್ಕವಾಯ್ತು, ಮದ್ಯದ ದರವಾಯ್ತು, ತೈಲ ಬೆಲೆಯಾಯ್ತು ಶೀಘ್ರವೇ ಬಸ್ ದರ ಹೆಚ್ಚಳವಾಗಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದ ವರ್ಷದೊಳಗೇ ತೆರಿಗೆ ಪರ್ವ, ಬೆಲೆ ಏರಿಕೆ ಪರ್ವಗಳೇ ಶುರುವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬೆಂಗಳೂರು: ಮುದ್ರಾಂಕ ಶುಲ್ಕವಾಯ್ತು, ಮದ್ಯದ ದರವಾಯ್ತು, ತೈಲ ಬೆಲೆಯಾಯ್ತು ಶೀಘ್ರವೇ ಬಸ್ ದರ ಹೆಚ್ಚಳವಾಗಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದ ವರ್ಷದೊಳಗೇ ತೆರಿಗೆ ಪರ್ವ, ಬೆಲೆ ಏರಿಕೆ ಪರ್ವಗಳೇ ಶುರುವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬೆಲೆ ಏರಿಕೆ ವಿರುದ್ಧ ಕಲಬುರಗಿಯಲ್ಲಿ ಬಿಜೆಪಿ ಗುರುವಾರ ಪ್ರತಿಭಟನೆ ನಡೆಸಿತು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹಾಗೂ ಇತರ ಮುಖಂಡರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡು, ನಂತರ ಬಿಡುಗಡೆ ಮಾಡಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಅಶೋಕ್ ಅವರು, ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿದ್ದಾಗ ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿಯನ್ನು ಟೀಕಿಸುತ್ತಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ರೀತಿ ಮಾಡುವುದಿಲ್ಲ ಎನ್ನುತ್ತಿದ್ದರು. ಆದರೀಗ ಮಾತಿಗೆ ತಪ್ಪಿದೆ.

15 ಬಾರಿ ಹಣಕಾಸು ಸಚಿವರಾಗಿ ಬಜೆಟ್ ಮಂಡಿದ್ದಾಗ ಹೇಳಿಕೊಳ್ಳುವ ಸಿದ್ದರಾಮಯ್ಯನವರಿಗೆ ಯಾವಾಗ ಅದೆಷ್ಟು ಹಣ ಹೊಂದಿಸಬೇಕು ಎಂಬುದು ಗೊತ್ತಿಲ್ಲವೇ? ಬಜೆಟ್ ಮಾರನೇ ದಿನವೇ ತೈಲಬೆಲೆ ಹೆಚ್ಚಿಸಬೇಕಿತ್ತು. ಸಮರ್ಥ ಹಣಕಾಸು ಸಚಿವನೆಂದು ಹೇಳಿಕೊಳ್ಳುವ ಸಿಎಂ ಸಮರ್ಥರಲ್ಲ. ತೆರಿಗೆ ಹೆಚ್ಚಿಸಿ ರಾಜ್ಯಭಾರ ಮಾಡುತ್ತಿದ್ದಾರೆಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT