ರ್ಯಾಲಿಯಲ್ಲಿ ಭಾಗವಹಿಸಿದ್ದ ಪೊಲೀಸರು  
ರಾಜ್ಯ

ಸಂಚಾರ ಉಲ್ಲಂಘನೆ ಮತ್ತು ಅಪಘಾತ ತಗ್ಗಿಸಲು ಶಾಲಾ ಪಠ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಪಾಠ ಸೇರ್ಪಡೆ: ಪೊಲೀಸರ ಒತ್ತಾಯ

ಪೊಲೀಸರು, ತಜ್ಞರ ಜೊತೆಗೂಡಿ ಪಠ್ಯಕ್ರಮವನ್ನು ಸಿದ್ಧಪಡಿಸಿದ್ದು, ಅದನ್ನು ಶೈಕ್ಷಣಿಕ ಪುಸ್ತಕಗಳಲ್ಲಿ ಅಳವಡಿಸಬಹುದಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್(TNIE) ಮತ್ತು ಹೀರೋ ಮೋಟೋಕಾರ್ಪ್(Hero Motocorp) ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈಡ್ ಸೇಫ್ ಇಂಡಿಯಾ ಅಭಿಯಾನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಠ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಪಾಠಗಳನ್ನು ಅಳವಡಿಸುವಂತೆ ಬೆಂಗಳೂರು ಪೊಲೀಸರು ಶಿಕ್ಷಣ ಮಂಡಳಿಗೆ ಮನವಿ ಮಾಡಿದ್ದಾರೆ.

ಪೊಲೀಸರು, ತಜ್ಞರ ಜೊತೆಗೂಡಿ ಪಠ್ಯಕ್ರಮವನ್ನು ಸಿದ್ಧಪಡಿಸಿದ್ದು, ಅದನ್ನು ಶೈಕ್ಷಣಿಕ ಪುಸ್ತಕಗಳಲ್ಲಿ ಅಳವಡಿಸಬಹುದಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು, ಪಾದಚಾರಿ ನಿಯಮಗಳು, ಹೆಲ್ಮೆಟ್‌ಗಳ ಪ್ರಾಮುಖ್ಯತೆ, ಸರಿಯಾದ ಶಿರಸ್ತ್ರಾಣ ಮತ್ತು ಸೀಟ್ ಬೆಲ್ಟ್‌ಗಳು, ಟ್ರಾಫಿಕ್ ಸಿಗ್ನಲ್‌ಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅತಿ ವೇಗದ ಚಾಲನೆಯಿಂದ ಉಂಟಾಗುವ ಅಪಾಯಗಳು ಸೇರಿದಂತೆ ವಿವಿಧ ಅಂಶಗಳನ್ನು ಪಾಠಗಳು ಒಳಗೊಂಡಿವೆ ಎಂದು ಹೇಳಿದರು.

ನಗರದಲ್ಲಿ ಸಂಭವಿಸುತ್ತಿರುವ ಸಂಚಾರ ನಿಯಮ ಉಲ್ಲಂಘನೆ ಮತ್ತು ಅಪಘಾತಗಳ ಪ್ರಮಾಣವು ಸಂಚಾರ ನಿಯಮಗಳನ್ನು ಪಾಲಿಸಿದರೆ ಪ್ರತಿ ರಸ್ತೆ ಅಪಘಾತ ಮತ್ತು ಗಾಯಗಳನ್ನು ತಡೆಯಬಹುದು ಎಂದು ಸೂಚಿಸುತ್ತದೆ. ‘ಜವಾಬ್ದಾರಿಯುತ ಭವಿಷ್ಯದ ಪೀಳಿಗೆಯನ್ನು ನಿರ್ಮಿಸುವಲ್ಲಿ ಸಂಚಾರ ನಿಯಮಗಳ ಅನುಸರಣೆಯ ಮಹತ್ವದ ಕುರಿತು ಯುವಜನರಿಗೆ ಶಿಕ್ಷಣ ನೀಡುವುದು ಬಹಳ ಮುಖ್ಯ ಎಂದರು.

ರಸ್ತೆ ಸುರಕ್ಷತೆಯ ಮೇಲೆ ಕೇಂದ್ರೀಕರಿಸಿದ ಸಮಗ್ರ ಪಠ್ಯಕ್ರಮವನ್ನು ಸಿದ್ಧಪಡಿಸುವ ಮೂಲಕ ಬೆಂಗಳೂರು ಪೊಲೀಸರು ಪೂರ್ವಭಾವಿ ಹೆಜ್ಜೆ ಇಟ್ಟಿದ್ದಾರೆ, ವಿದ್ಯಾರ್ಥಿಗಳು ಸಂಚಾರ ನಿಯಮಗಳು ಮತ್ತು ರಸ್ತೆಗಳಲ್ಲಿ ಸುರಕ್ಷಿತ ನಡವಳಿಕೆಯ ಬಗ್ಗೆ ಜ್ಞಾನವನ್ನು ಪಡೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಸುರಕ್ಷಿತ ಸವಾರಿ ಅಭ್ಯಾಸವನ್ನು ಉತ್ತೇಜಿಸುವ ಮತ್ತು ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ರೈಡ್ ಸೇಫ್ ಇಂಡಿಯಾ ಅಭಿಯಾನವು ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರದ ಸಚಿವರುಗಳು ಸೇರಿದಂತೆ ಹಲವು ವರ್ಗಗಳಿಂದ ವ್ಯಾಪಕ ಬೆಂಬಲವನ್ನು ಪಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT