ನಟ ದರ್ಶನ್ 
ರಾಜ್ಯ

ಮೈಸೂರು ಪಬ್ ನಲ್ಲಿ ಉದ್ಯಮಿ, ಡಿಜೆಗೆ ದರ್ಶನ್ ನಿಂದನೆ, ಬೆದರಿಕೆ: ಹಳೇ ವಿಡಿಯೋ ವೈರಲ್

ದರ್ಶನ್ ಹಾಗೂ ಅವರ ಸಹಚರರು ಪಬ್ ನಲ್ಲಿದ್ದಾಗ ಉದ್ಯಮಿ ಯಶವಂತ್ ತನ್ನ ಪತ್ನಿಯ ಹುಟ್ಟುಹಬ್ಬ ಆಚರಿಸಲು ಅಲ್ಲಿಗೆ ಕುಟುಂಬದವರೊಂದಿಗೆ ಆಗಮಿಸಿದ್ದರು.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಈ ಹಿಂದೆ ಮೈಸೂರಿನ ಪಬ್ ವೊಂದರಲ್ಲಿ ಉದ್ಯಮಿ ಹಾಗೂ ಡಿಜೆಯನ್ನು ನಿಂದಿಸಿ, ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿದೆ. ಕಳೆದ ವರ್ಷ ಫೆಬ್ರವರಿ 26 ರಂದು ಈ ಘಟನೆ ನಡೆದಿದೆ.

ದರ್ಶನ್ ಹಾಗೂ ಅವರ ಸಹಚರರು ಪಬ್ ನಲ್ಲಿದ್ದಾಗ ಉದ್ಯಮಿ ಯಶವಂತ್ ತನ್ನ ಪತ್ನಿಯ ಹುಟ್ಟುಹಬ್ಬ ಆಚರಿಸಲು ಅಲ್ಲಿಗೆ ಕುಟುಂಬದವರೊಂದಿಗೆ ಆಗಮಿಸಿದ್ದರು. ಬೆಳಗ್ಗೆ 12-30ರ ಸುಮಾರಿನಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹಾಡನ್ನು ಹಾಡಲು ಯಶವಂತ್ ಡಿಜೆಗೆ ಕೇಳಿದ್ದಾರೆ. ಇದು ದರ್ಶನ್ ಹಾಗೂ ಅವರ ಸಹಚರರನ್ನು ಕೆರಳಿಸಿದ್ದು, ಕೇವಲ ದರ್ಶನ್ ಹಾಡಿರುವ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ದರ್ಶನ್ ಹಾಗೂ ಆತನ ಗ್ಯಾಂಗ್ ಯಶವಂತ್ ಹಾಗೂ ಡಿಜೆಯನ್ನು ನಿಂದಿಸಿ, ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ದರ್ಶನ್ ಸಹಚರನ ವಿರುದ್ಧ ಎಫ್ ಐಆರ್ ಕೂಡಾ ದಾಖಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ದರ್ಶನ್ ವಿರುದ್ಧ ಎಫ್ ಐಆರ್ ದಾಖಲಾಗಿರಲಿಲ್ಲ. ಮಾತಿನ ಚಕಮಕಿಯಲ್ಲಿ ದರ್ಶನ್ ಭಾಗಿಯಾಗಿದ್ದಾಗಿ ಪೊಲೀಸರು ನಂತರ ಹೇಳಿದ್ದರು.

ರೇಣುಕಾಸ್ವಾಮಿ ಹತ್ಯೆಯಾದ ದಿನ ಬೆಂಗಳೂರಿನಲ್ಲಿ ಪಬ್ ವೊಂದರಲ್ಲಿ ದರ್ಶನ್ ಪಾರ್ಟಿ ಮಾಡಿದ್ದರು. ನಂತರ ರೇಣುಕಾಸ್ವಾಮಿಯನ್ನು ಅಪಹರಿಸಿ, ಇಡಲಾಗಿದ್ದ ಶೆಡ್ ಗೆ ತೆರಳಿದ್ದರು. ಹತ್ಯೆಗೂ ಮುನ್ನಾ ಆತನಿಗೆ ಕರೆಂಟ್ ಶಾಕ್ ಸೇರಿದಂತೆ ಚಿತ್ರಹಿಂಸೆ ನೀಡಲಾಗಿತ್ತು ಎಂಬುದನ್ನು ಆರೋಪಿ ಧನರಾಜ್ ಒಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ದರ್ಶನ್,ಪವಿತ್ರಾ ಗೌಡ ಸೇರಿದಂತೆ 19 ಮಂದಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ