ಸಂಗ್ರಹ ಚಿತ್ರ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯ; ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

ಬೆಂಗಳೂರು; ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

ಪೊಲೀಸ್ ಕಸ್ಟರಿ ಅಂತ್ಯ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ ರನ್ನು ಇಂದು ಹಾಜಪರುಪಡಿಸಲಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ ಪಡದಿರುವ ಕಾರಣ ಮತ್ತೊಮ್ಮೆ ಆರೋಪಿಗಳನ್ನು ಪೊಲೀಸರು ಸುಪರ್ದಿಗೆ ಪಡೆಯುವ ಸಾಧ್ಯತೆಗಳು ಕಡಿಮೆಯಿದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಳಗಾದರೆ ದರ್ಶನ್ ಮತ್ತು ಅವರ ಗ್ಯಾಂಗ್ ಅಂತಿಮವಾಗಿ ಜೈಲು ಸೇರಲಿದೆ.

ನ್ಯಾಯಾಲಯದ ಮುಂದೆ ಗುರುವಾರ ದರ್ಶನ್ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಮತ್ತೆರೆಡು ದಿನ ಕಸ್ಟಡಿಗೆ ಪೊಲೀಸರು ಪಡೆದಿದ್ದರು. ಈ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇನ್ನು ಕಾನೂನಿನಲ್ಲಿ ಕೂಡ ಮತ್ತೆ ಕಸ್ಟಡಿಗೆ ಪಡೆಯಲು ಪೊಲೀಸರಿಗೆ ಅವಕಾಶವಿಲ್ಲ ಎನ್ನಲಾಗಿದೆ.

ಇನ್ನು ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಪ್ರಿಯತಮೆ ಪವಿತ್ರಾಗೌಡ ಸೇರಿದಂತೆ 13 ಮಂದಿ ಆರೋಪಿಗಳು ಸೆರೆಮನೆ ವಾಸ ಶುರುವಾಗಿದೆ. ಹೀಗಾಗಿ ಬಾಕಿ ಉಳಿದಿರುವ ದರ್ಶನ್ ಸೇರಿ ನಾಲ್ವರು ಕೂಡ ಶನಿವಾರ ಸಂಜೆ ವೇಳೆಗೆ ಪೊಲೀಸ್ ಠಾಣೆಯ ಲಾಕಪ್ ನಿಂದ ಸೆಂಟ್ರಲ್ ಜೈಲ್'ನ ಕತ್ತಲ ಕೋಣೆಗೆ ಸ್ಥಳಾಂತರವಾಗಲಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದುವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಪೈಕಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದವರು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT