ಮೃತ ವಿನೋದ್ 
ರಾಜ್ಯ

Talasi Abbi Falls ನಲ್ಲಿ ಕಾಲು ಜಾರಿ ಬಿದ್ದು ಕೊಚ್ಚಿ ಹೋದ ಬೆಂಗಳೂರು ಪ್ರವಾಸಿಗ ಸಾವು

ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್‌ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ತಲಸಿ ಅಬ್ಬಿ ಫಾಲ್ಸ್​ನಲ್ಲಿ ನಡೆದಿದೆ.

ಹೊಸನಗರ: ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್‌ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ತಲಸಿ ಅಬ್ಬಿ ಫಾಲ್ಸ್​ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ 26 ವರ್ಷದ ವಿನೋದ್ ಎಂದು ಗುರುತಿಸಲಾಗಿದೆ. ಈತ ಬಳ್ಳಾರಿ ಮೂಲದವನಾಗಿದ್ದು, ಪ್ರವಾಸಕ್ಕೆ ತೆರಳಿದ್ದ ವೇಳೆ ಫಾಲ್ಸ್​ಗೆ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಪತ್ತೆಯಾದ ವಿನೋದ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದನಂತೆ. 12 ಜನರ ತಂಡದೊಂದಿಗೆ ಆಗಮಿಸಿ, ಕೊಡಚಾದ್ರಿಯಿಂದ ತಲಸಿ ಅಬ್ಬೆ ಫಾಲ್ಸ್​ಗೆ ತೆರಳಿದ್ದರು. ಇದೇ ವೇಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್‌ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ.

ಸದ್ಯ ನಾಪತ್ತೆಯಾಗಿರುವ ವಿನೋದ್​ಗಾಗಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲೆಯಾಗಿರುವ ಕಾರಣ ಪತ್ತೆ ಕಾರ್ಯಕ್ಕೆ ತೊಡಕು ಉಂಟಾಗಿದೆ. ಈ ಹಿಂದೆ ಕೊಲ್ಲೂರು ಘಾಟಿಗೆ ಹೊಂದಿಕೊಂಡಿರುವ ಅರಿಶಿನ ಗುಂಡಿ ಫಾಲ್ಸ್​ನಲ್ಲಿ ಭದ್ರಾವತಿ ಯುವಕ ಶರತ್ ಕಾಲು ಜಾರಿ ಬಿದ್ದಿದ್ದರು. ಶರತ್ ಕಾಲು ಜಾರಿ ಜಲಪಾತದಲ್ಲಿ ಬೀಳುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಘಟನಾ ಸ್ಥಳಕ್ಕೆ ಪಟ್ಟಣ ಠಾಣೆ ಪಿಎಸ್‌ಐ ರಮೇಶ್ ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾರಾಂತ್ಯ ಪ್ರವಾಸಕ್ಕೆ ಬಂದಿದ್ದ 12 ಯುವಕರ ಗುಂಪಿನಲ್ಲಿ ವಿನೋದ್ ಇದ್ದರು. ಯಡೂರು ತಲಸಿ ಅಬ್ಬಿ ಜಲಪಾತಕ್ಕೆ ಬರುವ ಮುನ್ನ ಕೊಡಚಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಕಳೆದ ವರ್ಷ ಮತ್ತೊಬ್ಬ ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ ಅಬ್ಬಿ ಜಲಪಾತದ ಮಾರ್ಗವನ್ನು ಕಂದಕ ತೋಡಿ ನಿರ್ಬಂಧಿಸಲಾಗಿತ್ತು. ಆದರೆ, ಯುವಕರು ವಾಹನ ನಿಲ್ಲಿಸಿ ಒಂದೂವರೆ ಕಿ.ಮೀ ನಡೆದು ಜಲಪಾತ ತಲುಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT