ಚಿನ್ಮಯಾನಂದ ಸ್ವಾಮೀಜಿ  
ರಾಜ್ಯ

ಚಿನ್ಮಯಾನಂದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ.

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ.

ಘಟನೆ ಸಂಬಂಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್‌ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಬೆಳಗ್ಗೆ ಮಾಲೂರಿನ ಸಂತಳ್ಳಿ ಗೇಟ್​ ಬಳಿಯ ಆಶ್ರಮದಲ್ಲಿ ಸ್ನಾನ ಮಾಡುತ್ತಿದ್ದ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಹೊರಗೆ ಎಳೆದುಕೊಂಡು ಬಂದ ಆರೋಪಿಗಳು ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆಶ್ರಮ ಹಾಗೂ ಆಸ್ಪತ್ರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು.

ಆಶ್ರಮಕ್ಕೆ ಸೇರಿದ ಪಾಲಿಟೆಕ್ನಿಕಲ್‌ ಕಾಲೇಜು ಸಂಬಂಧ ಚಿನ್ಮಯಾನಂದ ಮತ್ತು ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ, ಅರುಣ್ ಕುಮಾರ್‌ ಗುಂಪುಗಳ ನಡುವೆ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಇದೇ ವಿಚಾರವಾಗಿ ಹಿಂದೆಯೂ ಎರಡು ಗುಂಪುಗಳ ನಡುವೆ ಹಲವು ಬಾರಿ ಗಲಾಟೆ ನಡೆದಿತ್ತು. ಈ ಸಂಬಂಧ ಪೊಲೀಸ್​ ಠಾಣೆಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ಸಹ ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT