ಬಂಧಿತ ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಕೋರ್ಟ್ ಸೂಚನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ 17 ಆರೋಪಿಗಳ ಪೈಕಿ ನಾಲ್ವರನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ 17 ಆರೋಪಿಗಳ ಪೈಕಿ ನಾಲ್ವರನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಚಿತ್ರದುರ್ಗದಲ್ಲಿ ಮೆಡಿಕಲ್ ಸ್ಟೋರ್ ಉದ್ಯೋಗಿ 33 ವರ್ಷದ ರೇಣುಕಾಸ್ವಾಮಿ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಶರಣಾಗಿದ್ದ ನಾಲ್ವರು ಆರೋಪಿಗಳನ್ನು ಭದ್ರತೆಯ ಹಿನ್ನೆಲೆಯಲ್ಲಿ ತುಮಕೂರು ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ.

ಗಿರಿನಗರದ ವಿ ಕಾರ್ತಿಕ್ ಅಲಿಯಾಸ್ ಕಪ್ಪೆ (27) , ಗಿರಿನಗರದ ಆರ್ ಕೇಶವಮೂರ್ತಿ (27), ಬಿಜಿ ರಸ್ತೆಯ ನಿವಾಸಿ ಎಲ್ ನಿಖಿಲ್ ನಾಯಕ್ (21) ಮತ್ತು ಚಿತ್ರದುರ್ಗದ ರವಿಶಂಕರ್ ಅಲಿಯಾಸ್ ರವಿ (32) ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

ಕೋರ್ಟ್ ಆದೇಶ

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಹ ಆರೋಪಿಗಳು ಹಾಗೂ ದರ್ಶನ್ ಅವರ ಅಭಿಮಾನಿಗಳು ಹಲ್ಲೆ ನಡೆಸುವ ಸಾಧ್ಯತೆಗಳಿದ್ದು, ಆರೋಪಿಗಳಲ್ಲಿ ಕೆಲವರನ್ನು ತುಮಕೂರು ಜೈಲಿಗೆ ಸ್ಥಳಾಂತರಿಸುವಂತೆ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಧೀಶರಿಗೆ ಪ್ರಾಸಿಕ್ಯೂಷನ್ ಶನಿವಾರ ಮನವಿ ಮಾಡಿದೆ.

ನಾಲ್ವರು ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನ್ಯಾಯಾಧೀಶರು ಸೋಮವಾರ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ರಾತ್ರಿ ನಾಲ್ವರು ಆರೋಪಿಗಳನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಈ ಹಿಂದೆ ಹಣಕಾಸಿನ ವಿಚಾರದಲ್ಲಿ ಸಂತ್ರಸ್ತ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ನಾಲ್ವರು ಜೂನ್ 10 ರಂದು ಕಾಮಾಕ್ಷಿಪಾಳ್ಯ ಪೊಲೀಸರ ಮುಂದೆ ಶರಣಾಗಿದ್ದರು. ನಾಲ್ವರನ್ನು ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ದರ್ಶನ್ ಹೆಸರನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ಈ ನಾಲ್ವರು ದರ್ಶನ್ ಹೆಸರನ್ನು ಬಹಿರಂಗಪಡಿಸಿರುವುದರಿಂದ ಜೈಲಿನಲ್ಲಿ ಅವರ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?