ಕಾರವಾರದ ವಾಹನ ಸವಾರರು ಗೋವಾದ ಪೆಟ್ರೋಲ್ ಬಂಕ್'ನಲ್ಲಿ ತಮ್ಮ ವಾಹನಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳುತ್ತಿರುವುದು. 
ರಾಜ್ಯ

ಪೆಟ್ರೋಲ್ 7 ರೂ. ಚೀಪ್: ಗೋವಾ ಗಡಿ ಬಂಕ್ ಗಳಲ್ಲಿ ರಾಜ್ಯದ ವಾಹನಗಳು ಸಾಲು!

ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 7 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ.

ಕಾರವಾರ: ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆ ಹೆಚ್ಚಳವಾಗಿದ್ದು, ಇದರ ಪರಿಣಾಮ ಕಾರವಾರದ ಹೆಚ್ಚಿನ ವಾಹನ ಸವಾರರು ಇದೀಗ ಗೋವಾದತ್ತ ಮುಖ ಮಾಡುತ್ತಿದ್ದಾರೆ.

ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 7 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ. ಹೀಗಾಗ ಸೂರ್ಯಾಸ್ತವಾಗುತ್ತಿದ್ದಂತಯೇ ಟ್ರಕ್ ಚಾಲಕರು ಕರ್ನಾಟಕ-ಗೋವಾ ಗಡಿಗೆ ತೆರಳಿ ಅಲ್ಲಿ, ಸರತಿ ಸಾಲಿನಲ್ಲಿ ನಿಂತು ಪೆಟ್ರೋಲ್-ಡೀಸೆಲ್ ತುಂಬಿಸಿಕೊಳ್ಳುತ್ತಿದ್ದಾರೆ.

ಗೋವಾದಲ್ಲಿ ಪೆಟ್ರೋಲ್ ಕರ್ನಾಟಕಕ್ಕಿಂತ ಯಾವಾಗಲೂ ಅಗ್ಗವಾಗಿರುತ್ತದೆ, ಇದೀಗ, ಕರ್ನಾಟಕದ ತೈಲ ಬೆಲೆಗೆ ಹೋಲಿಕೆ ಮಾಡಿದರೆ, ಇನ್ನೂ ಅಗ್ಗವಾಗಿದೆ. ಕೇಂದ್ರ ಸರ್ಕಾರವು ಇಂಧನ ಶುಲ್ಕವನ್ನು ಕಡಿಮೆ ಮಾಡಿದ ಬಳಿಕ ಇದೀಗ ಲೀಟರ್‌ಗೆ 99 ರೂ.ಗೆ ಇಳಿದಿದೆ. ಕಾರವಾರಕ್ಕೆ ಹೋಲಿಸಿದರೆ ಗೋವಾದಲ್ಲಿ ಡೀಸೆಲ್ ಬೆಲೆ ಸ್ವಲ್ಪ ಕಡಿಮೆಯಾಗಿದೆ, ಅಲ್ಲಿ 88.07 ರೂ.ಗೆ ಮಾರಾಟವಾದರೆ, ಕರ್ನಾಟಕದಲ್ಲಿ 90.57 ರೂಗೆ ಮಾರಾಟ ಮಾಡಲಾಗುತ್ತಿದೆ ಎಂದು ಚಾಲಕರೊಬ್ಬರು ಹೇಳಿದ್ದಾರೆ.

ಕಾರವಾರದಲ್ಲಿ ಈಗ ಪೆಟ್ರೋಲ್ ಬೆಲೆ 104 ರೂ ಇದೆ. ಆದರೆ, ಕಡಿಮೆ ಬೆಲೆಗೆ ಪೆಟ್ರೋಲ್ ಬೇಕು ಎಂದರೆ 15 ಕಿ.ಮೀ ಪ್ರಯಾಣಿಸಿ ಗೋವಾ ಗಡಿಯಲ್ಲಿ ಟ್ಯಾಂಕ್ ತುಂಬಿಸಿಕೊಳ್ಳಬಹುದು ಕಾರವಾರದ ಪೆಟ್ರೋಲ್ ಪಂಪ್‌ನ ಉದ್ಯೋಗಿ ಪ್ರಶಾಂತ್ ಅವರು ಹೇಳಿದ್ದಾರೆ.

ಬೆಲೆ ಏರಿಕೆಯಾದ ಬೆನ್ನಲ್ಲೇ ಇಲ್ಲಿನ ಬಹುತೇಕ ಗ್ರಾಹಕರು ಗೋವಾಗೆ ಗಡಿಗಳಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾರೆ. ಹೀಗಾಗ ಕಾರವಾರದ ಬಂಕ್‌ಗಳಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ನಾವು ಪ್ರತಿ ಲೀಟರ್‌ಗೆ 8 ರೂ.ವರೆಗೆ ಉಳಿಸಬಹುದು. ಗೋವಾದಲ್ಲಿ ಪ್ರತಿ ಲೀಟರ್‌ಗೆ 95.50 ರೂ.ಗಳನ್ನು ನೀಡುತ್ತಿದ್ದೇವೆ. ಕರ್ನಾಟಕದಲ್ಲಿ 104.49 ರೂ ನೀಡಬೇಕಾಗಿದೆ ಗೋವಾದಲ್ಲಿ 11 ಲೀಟರ್ ಇಂಧನವನ್ನು ಖರೀದಿಸಿದರೆ, ಉಳಿದ ಹಣದಲ್ಲಿ ಮತ್ತೊಂದು ಲೀಟರ್ ಹಾಕಿಸಿಕೊಳ್ಳಬಹುದು ಎಂದು ಸುನಿಲ್ ಎಂಬುವವರು ಹೇಳಿದ್ದಾರೆ.

ಕರ್ನಾಟಕ ಮತ್ತು ಗೋವಾದಲ್ಲಿ ಇಂಧನ ಬೆಲೆಗಳು 15 ರೂಪಾಯಿ ಅಂತರ ಹೊಂದಿದೆ. ಹೀಗಾಗಿ ಜನರು ಅದರ ಲಾಭವನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಗೋವಾಲದಲ್ಲಿ ತೆರಿಗೆ ಹೆಚ್ಚಿಸಲಾಗಿತ್ತು. ಈ ವೇಳೆ ಚಾಲಕರು ಗೋವಾಗೆ ಹೋಗುವುದನ್ನು ನಿಲ್ಲಿಸಿದ್ದರು. ಇದೀಗ ಮತ್ತೆ ಗೋವಾದತ್ತ ಮುಖ ಮಾಡುತ್ತಿದ್ದಾರೆಂದು ಪೆಟ್ರೋಲ್ ಬಂಕ್ ಹೊಂದಿರುವ ಗೋವಾದ ಪೋಂಡಾ ಮೂಲದ ಅಮರ್ ಕೋಟಾರ್ಕರ್ ಅವರು ಹೇಳಿದ್ದಾರೆ.

ಗೋವಾದ ಪೊಲೆಮ್‌ನಲ್ಲಿರುವ ಪೆಟ್ರೋಲ್ ಪಂಪ್‌ನ ಉದ್ಯೋಗಿ ಮಹೇಶ್ ರತ್ನಾಕರ್ ನಾಯಕ್ ಅವರು ಮಾತನಾಡಿಸ ಇಂಧನಕ್ಕಾಗಿ ಹೆಚ್ಚಿನ ವಾಹನಗಳು ಬರುತ್ತಿವೆ ಎಂದು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!