ಕುಮಾರಸ್ವಾಮಿ 
ರಾಜ್ಯ

ಸೂರಜ್ ರೇವಣ್ಣ ಬಂಧನ: ಮಾಧ್ಯಮಗಳ ಪ್ರಶ್ನೆಗೆ HDK ಸಿಡಿಮಿಡಿ; ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ? ಎಂದ ಕೇಂದ್ರ ಸಚಿವ

ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತಾರಾ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಹೇಳಿದರು.

ಬೆಂಗಳೂರು: ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತಾರಾ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಹೇಳಿದರು.

ಯುವಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ಸೂರಜ್ ರೇವಣ್ಣ ಬಂಧನಕ್ಕೊಳಗಾಗಿದ್ದು, ಈ ಕುರಿತು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಆರಂಭದಲ್ಲಿ ಕುಮಾರಸ್ವಾಮಿಯವರು ಸಿಡಿಮಿಡಿಕೊಂಡರು.

ಈ ಪ್ರಶ್ನೆಯನ್ನು ನಂಗ್ಯಾಕೆ ಕೇಳ್ತೀರಿ? ನಂಗೂ ಅದಕ್ಕೂ ಏನು ಸಂಬಂಧ? ಇಂತಹ ಪ್ರಶ್ನೆಗಳಿಗೆ ಉತ್ತರಿಸುವ ಅವಶ್ಯಕತೆ ನಂಗಿಲ್ಲ ಎಂದು ಕೆಂಡಾಮಂಡಲವಾದರು. ಬಳಿಕ ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಹತ್ರ ಚರ್ಚೆ ಮಾಡಬಾರದು. ರಾಜ್ಯಕ್ಕೆ ಸಂಬಂಧಪಟ್ಟ ವಿಷ್ಯಗಳಿದ್ರೆ ಚರ್ಚೆ ಮಾಡಿ ಎಂದರು.

ಆ ವಿಷ್ಯಗಳನ್ನು ನನ್ನ ಹತ್ತಿರ ಯಾಕೆ ಚರ್ಚೆ ಮಾಡ್ತೀರಾ. ಅದರ ಅವಶ್ಯಕತೆ ಏನಿದೆ. ಅದಕ್ಕೆ ಕಾನೂನು ಇರುತ್ತದೆ. ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಅದು ಯಾತಕ್ಕೆ ಬರುತ್ತದೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ತಿಳಿಸಿದರು.

ಗೌಡರ ಕುಟುಂಬವನ್ನು ಮುಗಿಸಲು ಕೆಲವರು ಯತ್ನಿಸುತ್ತಿದ್ದು, ಈ ರೀತಿಯ ಆರೋಪಗಳು ದೇವೇಗೌಡರನ್ನು ಕಾಡುತ್ತಿವೆ. ಕುಟುಂಬದ ಯುವಕರು ತಪ್ಪು ಮಾಡಿದಾಗ ಹಿರಿಯರು ಏನು ಮಾಡಲು ಸಾಧ್ಯ, ದೇವೇಗೌಡರಿಗೆ ಯಾಕೆ ಇಂತಹ ಪ್ರಶ್ನೆಗಳನ್ನು ಕೇಳುತ್ತೀರಿ?... ಏನೇ ಆದರೂ ಅವರು ಚೈತನ್ಯ ಕಳೆದುಕೊಳ್ಳುವುದಿಲ್ಲ. ನಾವು ರಾಜಕೀಯದಿಂದ ನಿವೃತ್ತಿ ಹೊಂದುವುದಿಲ್ಲ. ನಾನು ಎರಡು ಬಾರಿ ಸಿಎಂ ಆಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

ಇದೇ ವೇಳೆ ಅಧಿಕಾರಿಗಳು ಸಿಎಂ ಮತ್ತು ಉಪಮುಖ್ಯಮಂತ್ರಿಗಳ ಗುಲಾಮರಂತೆ ವರ್ತಿಸದೆ ಕಾನೂನು ಪ್ರಕಾರ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಈ ಹಿಂದೆ ಜೆಡಿಎಸ್ ಅಂತ್ಯವಾಗಲಿದೆ ಎಂದು ಹೇಳುತ್ತಿದ್ದವರು ಈಗ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಜನರ ನಂಬಿಕೆ ಇರುವವರೆಗೂ ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಸಾಧ್ಯವಿಲ್ಲ. ಒಬ್ಬ ನಟನನ್ನು ಬಂಧಿಸಿದರೂ ಮಾಧ್ಯಮಗಳು ನನ್ನತ್ತ ಬೊಟ್ಟು ಮಾಡುತ್ತವೆ. ಆ ಸಹೋದರರ (ಡಿಕೆ.ಶಿವಕುಮಾರ್-ಡಿಕೆ.ಸುರೇಶ್) ವಿರುದ್ಧ ಇದೇ ರೀತಿಯ ಆರೋಪಗಳನ್ನು ಮಾಡಿದ್ದರೆ, ಅವರು ಸ್ಟುಡಿಯೊಗೆ ಬೆಂಕಿ ಹಚ್ಚುತ್ತಿದ್ದರು ಎಂದು ಕಿಡಿಕಾರಿದರು.

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಹಾಸನದ ಸೆನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಸಂತ್ರಸ್ತ ಯುವಕ ಶುಕ್ರವಾರ ಡಿಜಿ ಕಛೇರಿಯಲ್ಲಿ ದೂರು ನೀಡಿದ್ದ. ಅಲ್ಲದೇ, ಹಾಸನ ಎಸ್ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದ. ಈ ದೂರನ್ನು ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದರು.

ನಿನ್ನೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ನೀಡಿದ ದೂರು ಆಧರಿಸಿ, ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT