ಪ್ರಥಮ್, ದರ್ಶನ್, ದರ್ಶನ್ ಅಭಿಮಾನಿ ಸಾಂದರ್ಭಿಕ ಚಿತ್ರ 
ರಾಜ್ಯ

ನಟ ಪ್ರಥಮ್, ಉಮಾಪತಿಗೆ ಅವಾಚ್ಯ ಪದಗಳಿಂದ ನಿಂದನೆ: ಕ್ಷಮೆ ಕೇಳಿದ ದರ್ಶನ್ ಅಭಿಮಾನಿ!

ದರ್ಶನ್ ವಿರುದ್ಧ ಹೇಳಿಕೆ ಆರೋಪದಲ್ಲಿ ನಟ ಪ್ರಥಮ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ದರ್ಶನ್ ಅಭಿಮಾನಿ ಕೊನೆಗೂ ಕ್ಷಮೆ ಕೇಳಿದ್ದಾನೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗೆ ನಟ ದರ್ಶನ್ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿದ್ದಾಗ ಹೊರಗಡೆ ಜಮಾಯಿಸಿದ್ದ ಕೆಲ ಅಭಿಮಾನಿಗಳು ರಂಪ ರಾದ್ದಾಂತ ಮಾಡಿದ್ದರು. ಈ ವೇಳೆ ದರ್ಶನ್ ವಿರುದ್ಧ ಹೇಳಿಕೆ ಆರೋಪದಲ್ಲಿ ನಟ ಪ್ರಥಮ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ದರ್ಶನ್ ಅಭಿಮಾನಿ ಕೊನೆಗೂ ಕ್ಷಮೆ ಕೇಳಿದ್ದಾನೆ. ಆತ ವೀಡಿಯೋ ಮಾಡಿ ಇಬ್ಬರ ಕ್ಷಮೆ ಕೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೋ ಹಂಚಿಕೊಂಡು ಪ್ರಥಮ್ ಪೋಸ್ಟ್ ಮಾಡಿದ್ದಾರೆ.

ಮಾತಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ನಮ್ಮ ಫೋನ್ ಪೊಲೀಸ್ ವಶಪಡಿಸಿಕೊಂಡು ಎಲ್ಲಾ ಕಾಮೆಂಟ್ಸ್, ಮೆಸೇಜ್‌ನ ಗಮನಿಸುತ್ತಿದ್ದಾರೆ. ಯಾರಿಗೋಸ್ಕರವೋ ದಯವಿಟ್ಟು ನಿಮ್ಮ‌ಲೈಫ್‌ನ ಹಾಳುಮಾಡಿಕೊಳ್ಳಬೇಡಿ; ಕನ್ನಡಕ್ಕಾಗಿ, ಕಾವೇರಿಗಾಗಿ ಬೇಕಿದ್ರೆ ಜೈಲಿಗೆ ಹೋಗಿ. ಪುಂಡಾಟ ಆಡ್ಕೊಂಡು ನಿಮ್ ಕುಟುಂಬ ಬೀದಿಗೆ ತರಬೇಡಿ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ" ಎಂದು ಪ್ರಥಮ್ ಬರೆದುಕೊಂಡಿದ್ದಾರೆ.

"ನನ್ನ ಹೆಸರು ಚೇತನ್. ನಾನು ದರ್ಶನ್ ಅಭಿಮಾನಿ. ಅವತ್ತು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಬಳಿ ಹೋಗಿದ್ದೆ. ಉಮಾಪತಿ ಹಾಗೂ ಪ್ರಥಮ್ ಅವರ ಬಗ್ಗೆ ಮಾತನಾಡಿದ್ದೆ. ಕಾನೂನು ಪ್ರಕಾರ ಏನಿದೆ, ನಾನು ಅವರಿಗೆ ತಲೆ ಬಾಗುತ್ತೇನೆ. ನನ್ನಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಿಬಿಡಿ" ಎಂದು ಕೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT