ಮಗನ ಹತ್ಯೆ ಪ್ರಕರಣದ ಆರೋಪಿ ಸುಚನ ಸೇಠ್ 
ರಾಜ್ಯ

4 ವರ್ಷದ ಮಗನ ಹತ್ಯೆ ಪ್ರಕರಣ: ಸುಚನಾ ಸೇಠ್ ಮಾನಸಿಕ ಆರೋಗ್ಯ ಉತ್ತಮವಾಗಿದೆ; 2ನೇ ವರದಿಯಲ್ಲೂ ವೈದ್ಯರ ಪುನರುಚ್ಛಾರ

4 ವರ್ಷದ ತನ್ನ ಮಗನನ್ನು ಹತ್ಯೆಗೈದು ಸೆರೆವಾಸದಲ್ಲಿರುವ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು 2ನೇ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ.

ಬೆಳಗಾವಿ: 4 ವರ್ಷದ ತನ್ನ ಮಗನನ್ನು ಹತ್ಯೆಗೈದು ಸೆರೆವಾಸದಲ್ಲಿರುವ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು 2ನೇ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ.

ಮಾನಸಿಕ ಆರೋಗ್ಯ ಪ್ರಾಧಿಕಾರವು ಸುಚನಾ ಅವರ ಮಾನಸಿಕ ಆರೋಗ್ಯವನ್ನು ಮರು ಮೌಲ್ಯಮಾಪನ ಮಾಡಬೇಕೆಂದು ಸುಚನಾ ಸೇಠ್ ಅವರ ತಂದೆ ಒತ್ತಾಯಿಸಿದ್ದರು, ಬಾಂಬೋಲಿಮ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಸೈಕಿಯಾಟ್ರಿ ಅಂಡ್ ಹ್ಯೂಮನ್ ಬಿಹೇವಿಯರ್ (IPHB) ನ ಸಂಶೋಧನೆಗಳನ್ನು ವಿರೋಧಿಸಿ ಸುಚನಾ ಅವರ ತಂದೆ ಫೆಬ್ರವರಿ ತಿಂಗಳಿನಲ್ಲಿ ಅರ್ಜಿಯನ್ನು ಸಲ್ಲಿಸಿದರು. ಈ ಮನವಿಯನ್ನು ಗೋವಾದ ಮಕ್ಕಳ ನ್ಯಾಯಾಲಯವು ಮಾರ್ಚ್‌ನಲ್ಲಿ ಅಂಗೀಕರಿಸಿತ್ತು. ಇದೀಗ 2ನೇ ವೈದ್ಯಕೀಯ ವರದಿಯೂ ಸುಚನಾ ಅವರಪ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು ತಿಳಿಸಿದೆ.

ಈ ನಡುವೆ ಮಗುವಿನ ಮೃತದೇಹ ಇರಿಸಿದ್ದ ಸೂಟ್ ಕೇಸ್ ನಲ್ಲಿ ಪತ್ತೆಯಾದ ಟಿಶ್ಯೂ ಪೇಪರ್ ನಲ್ಲಿದ್ದ ಬರಹವನ್ನು ಸುಚನಾ ಸೇಠ್ ಅವರೇ ಬರೆದಿದ್ದರು ಎನ್ನಲಾಗಿದ್ದು, ಈ ಪೇಪರ್ ನ್ನು ಪುಣೆಯ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಿಶ್ಯೂ ಪೇಪರ್ ನಲ್ಲಿದ್ದ ಬರಹಗಳು ಸುಚನಾ ಅವರು ತಮ್ಮ ಪತಿಯ ವಿರುದ್ಧ ಆಕ್ರೋಶ ಹೊರಹಾಕಿರುವುದು ಕಂಡು ಬದಿದೆ. ತಮ್ಮ ಮಾಜಿ ಪತಿ ವೆಂಕಟ್ ರಾಮನ್ ಅವರು ಮಗುವನ್ನು ಭೇಟಿ ಮಾಡುವುದು ತಮಗಿಷ್ಟವಿಲ್ಲ. ಮಗು ಕೂಡ ತಂದೆ ಜೊತೆಗೆ ಕಳುಹಿಸದಂತೆ ಮನವಿ ಮಾಡಿಕೊಳ್ಳುತ್ತಿತ್ತು. ಮಗುವನ್ನು ಕಳುಹಿಸದಿದ್ದರೆ, ನನ್ನ ಮಾಜಿ ಪತಿ ಹಾಗೂ ಕೌಟುಂಬಿಕ ನ್ಯಾಯಾಲಯದ ನ್ಯಾಯಾಶೀಘರು ನನಗೆ ಜೈಲು ಶಿಕ್ಷೆ ವಿಧಿಸುವ ಬೆದರಿಕೆ ಹಾಕುತ್ತಿದ್ದಾರೆಂದೂ ಸುಚನಾ ಬರಹದ ಮೂಲಕ ಹೇಳಿಕೊಂಡಿರುವುದು ಕಂಡು ಬಂದಿತ್ತು.

ಬೆಂಗಳೂರು ಮೂಲದ ಮೈಂಡ್‌ಫುಲ್‌ ಎ.ಐ ಲ್ಯಾಬ್‌ ಹೆಸರಿನ ಖಾಸಗಿ ಕಂಪನಿಯ ಸಿಇಒ 39 ವರ್ಷ ವಯಸ್ಸಿನ ಸುಚನಾ ಸೇಠ್‌ ಜನವರಿ 6ರಂದು ಗೋವಾದ ಹೋಟೆಲ್ ಒಂದರಲ್ಲಿ ತಮ್ಮ 4 ವರ್ಷದ ಮಗು ಚಿನ್ಮಯ್‌ನನ್ನು ಹತ್ಯೆ ಮಾಡಿದ್ದಳು. ಬಳಿಕ ಮೃತದೇಹವನ್ನು ಸೂಟ್‌ಕೇಸ್‌ಗೆ ತುಂಬಿ ಕಾರಿನಲ್ಲಿ ಗೋವಾದಿಂದ ಬೆಂಗಳೂರಿನತ್ತ ಸಾಗಿಸುತ್ತಿದ್ದ ವೇಳೆ ಗೋವಾ ಪೊಲೀಸರ ಸೂಚನೆಯ ಮೇರೆಗೆ ಚಿತ್ರದುರ್ಗದ ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT