ಬಂಧನ(ಸಾಂಕೇತಿಕ ಚಿತ್ರ) 
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಯುವ ಮುಖಂಡ ಅರುಣ್ ಕುಗ್ವೆ ಬಂಧನ

ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ವೆಸಗುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ವೆಸಗುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸಂತ್ರಸ್ತ ಯುವತಿಯು ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಪೊಲೀಸರು ಬಂಧಿಸಿದ್ದು ಎಫ್‌ಐಆರ್ ದಾಖಲಾಗಿದೆ.

ಕಾಲೇಜಿನಲ್ಲಿ ಓದುತ್ತಿದ್ದ ಸಂದರ್ಭದಲ್ಲಿಯೇ ಅರುಣ್ ಕುಗ್ವೆ ಅವರ ಪರಿಚಯವಾಗಿದ್ದು, ಬಳಿಕ ಸ್ನೇಹ ಪ್ರೀತಿಗೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಮನೆಗಳಿಗೆ ಸಂಬಂಧ ಒಪ್ಪಿಗೆಯಾಗಿದೆ. ಉದ್ಯಮಿ ಮತ್ತು ರಾಜಕಾರಣಿ ಎಂದು ಹೇಳಿಕೊಂಡಿದ್ದ ಅರುಣ್, ಮುಂದೆ ವಿವಾಹವಾಗುವ ಹುಸಿ ಭರವಸೆ ನೀಡಿ ಜೋಗ, ಸಾಗರ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

ಬೇರೆ ಹುಡುಗಿಯರ ಜೊತೆ ಸಂಬಂಧ ಹೊಂದಿರುವ ಮಾಹಿತಿ ಕುರಿತು ವಿಚಾರಿಸಿದರೆ ನನಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಈಗ ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ಅರುಣ್‌ ಹಾಗೂ ಆತನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅರುಣ್ ಕುಗ್ವೆ ಮೇಲೆ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಗಡಿಪಾರು ಸೂಚನೆಯನ್ನೂ ಹಿಂದೆ ನೀಡಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಗಂಭೀರತೆಯನ್ನು ಆಧರಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT