ನೂತನ ಸಂಸದರು 
ರಾಜ್ಯ

ಸಂಸತ್ ನಲ್ಲಿ ಕನ್ನಡ ಕಲರವ: ರಾಜ್ಯದ 27 ಸಂಸದರು ಕನ್ನಡದಲ್ಲಿ, ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣವಚನ!

ಬಹುತೇಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ) ಸಂವಿಧಾನದ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು/ನವದೆಹಲಿ: ಲೋಕಸಭೆಯ ಚುನಾವಣೆ ಮುಗಿದು ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸೋಮವಾರದಿಂದ ನೂತನ ಲೋಕಸಭೆಯ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಮಂದಿ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ನೂತನ ಸಂಸದ ಕಾಗೇರಿಯವರನ್ನು ಹೊರತುಪಡಿಸಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಸೇರಿ ಉಳಿದೆಲ್ಲಾ ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.

ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ), ಸಾಗರ್ ಖಂಡ್ರೆ (ಬೀದರ್), ಡಾ.ಕೆ.ಸುಧಾಕರ್ (ಚಿಕ್ಕಬಳ್ಳಾಪುರ), ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ಮೈಸೂರು-ಕೊಡಗು), ಪಿ.ಸಿ.ಮೋಹನ್ (ಬೆಂಗಳೂರು ಸೆಂಟ್ರಲ್), ಡಾ.ಸಿ.ಎನ್.ಮಂಜುನಾಥ್ (ಬೆಂಗಳೂರು ಗ್ರಾಮಾಂತರ), ಬಸವರಾಜ ಬೊಮ್ಮಾಯಿ (ಹಾವೇರಿ) ಮತ್ತಿತರರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಹುತೇಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ) ಸಂವಿಧಾನದ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ದಕ್ಷಿಣ ಕನ್ನಡದ ನೂತನ ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರು ತುಳುನಾಡಿನ ದೈವ-ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಿದರು. ಜೊತೆಗೆ ಪ್ರಮಾಣವಚನ ಕೊನೆಯಲ್ಲಿ ತುಳುಭಾಷೆಯಲ್ಲಿ ಮಾತೆರೆಗ್ಲಾ ಸೊಲ್ಮೆಲು (ಎಲ್ಲರಿಗೂ ನಮನಗಳು) ಎಂದೂ ಹೇಳಿದ್ದು, ಇದಕ್ಕೆ ತುಳುನಾಡಿನಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇನ್ನು ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮಾತ್ರ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದರು. ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭತೃಹರಿ ಮಹತಾಬ್ ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT