ಕೃಷ್ಣರಾಜ ಸಾಗರ ಅಣೆಕಟ್ಟಿನ ಚಿತ್ರ 
ರಾಜ್ಯ

ಜಲ ಹಂಚಿಕೆ ವಿವಾದ: ಪರಿಸ್ಥಿತಿ ಪರಿಶೀಲನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಮುಂದು

ಜೂನ್ 14 ರಂದು ನಡೆದ 97 ನೇ ಸಿಡಬ್ಲ್ಯೂಆರ್‌ಸಿ ಸಭೆಯ ಆದೇಶದ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಂದ ಸಿಡಬ್ಲ್ಯುಎಂಎ ಮತ್ತು ಜಲಶಕ್ತಿ ಸಚಿವಾಲಯದ ಅಧಿಕಾರಿಗಳು 31 ನೇ ಸಭೆಯಲ್ಲಿ ಅಹವಾಲುಗಳನ್ನು ಆಲಿಸಿದರು.

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು(CWMA) ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ, ಸಸ್ಯ ಮತ್ತು ಪ್ರಾಣಿಗಳ ಪೋಷಣೆಗಾಗಿ ಪರಿಸರದ ಹರಿವುಗಳಿಗಾಗಿ ಎಲ್ಲಾ ಜಲಾಶಯಗಳಲ್ಲಿ ನೀರನ್ನು ಸಂರಕ್ಷಿಸುವಂತೆ ಕೇಳಿದೆ. ಕಾವೇರಿ ಜಲಾನಯನ ಪ್ರದೇಶದ ಜಲವಿಜ್ಞಾನದ ಪರಿಸ್ಥಿತಿಯನ್ನು ಪರಿಶೀಲಿಸಲು ತಂಡವು ಕರ್ನಾಟಕಕ್ಕೆ ಭೇಟಿ ನೀಡಲಿದೆ.

ಜೂನ್ 14 ರಂದು ನಡೆದ 97 ನೇ ಸಿಡಬ್ಲ್ಯೂಆರ್‌ಸಿ ಸಭೆಯ ಆದೇಶದ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಂದ ಸಿಡಬ್ಲ್ಯುಎಂಎ ಮತ್ತು ಜಲಶಕ್ತಿ ಸಚಿವಾಲಯದ ಅಧಿಕಾರಿಗಳು 31 ನೇ ಸಭೆಯಲ್ಲಿ ಅಹವಾಲುಗಳನ್ನು ಆಲಿಸಿದರು.

ಕರ್ನಾಟಕವು ತನ್ನ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ಇದುವರೆಗೆ ಶೇಕಡಾ 70ರಷ್ಟು ನೀರಿನ ಕೊರತೆಯಿದೆ ಎಂದು ಹೇಳಿದೆ. ಆದ್ದರಿಂದ ಯಾವುದೇ ಆದೇಶವನ್ನು ಅನುಸರಿಸಲು ಕಷ್ಟವಾಗುತ್ತದೆ. ಜೂನ್ 1 ರಿಂದ 24 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವು 7.307 ಟಿಎಂಸಿ ಆಗಿದ್ದು, ಇದೇ ಅವಧಿಯಲ್ಲಿ ಕಳೆದ 30 ವರ್ಷಗಳ ಸರಾಸರಿ ಒಳಹರಿವು 24.448 ಟಿಎಂಸಿ ಆಗಿದೆ. ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಮಂಡಳಿಯ (CWTA) ಅಂತಿಮ ತೀರ್ಪಿನ ಪ್ರಕಾರ ಸಾಮಾನ್ಯ ವರ್ಷದಲ್ಲಿ 9.19 ಟಿಎಂಸಿ ಅಂದರೆ ಸುಮಾರು 3,550 ಕ್ಯೂಸೆಕ್‌ಗಳ ಅಂತಾರಾಜ್ಯ ಬಿಂದು ಬಿಳಿಗುಂಡ್ಲುವಿನಲ್ಲಿ ಖಚಿತಪಡಿಸಿದೆ.

ಬಿಳಿಗುಂಡ್ಲು ಜೂನ್ 24 ಕ್ಕೆ 5.367 ಕ್ಕೆ 2 ಟಿಎಂಸಿಗಿಂತ ಕಡಿಮೆಯಾಗಿದೆ. ಜೂನ್ 24 ಕ್ಕೆ ಬಿಳಿಗುಂಡ್ಲುವಿನಲ್ಲಿ 5.367 ಟಿಎಂಸಿ ಕೊರತೆ ಹರಿಯುವಂತೆ ಕರ್ನಾಟಕಕ್ಕೆ ನಿರ್ದೇಶಿಸಬೇಕು. ಜೂನ್ 2024 ರ ಉಳಿದ ಅವಧಿಗೆ ಮತ್ತು ಜುಲೈ 2024 ಕ್ಕೆ 31.24 ಟಿಎಂಸಿ ನಿಗದಿತ ನೀರು ಹರಿಯುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಮಿಳುನಾಡು ಒತ್ತಾಯಿಸಿದೆ.

ಮುಂದಿನ ತಿಂಗಳು ಜುಲೈ 26 ರಂದು ನಡೆಯುವ ಮುಂದಿನ ಸಭೆಯ ವೇಳಾಪಟ್ಟಿಯಲ್ಲಿ ಜಲವಿಜ್ಞಾನದ ಪರಿಸ್ಥಿತಿಯನ್ನು ಪರಿಶೀಲಿಸಲು ತಂಡವನ್ನು ನೇಮಿಸಲು ಪ್ರಾಧಿಕಾರವು ಸ್ಪಷ್ಟವಾಗಿ ನಿರ್ಧರಿಸಿದೆ. ಕರ್ನಾಟಕದ ಜಲಾಶಯದ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಆದೇಶವನ್ನು ರವಾನಿಸಲಾಗುತ್ತದೆ.

CWMA ಅಧ್ಯಕ್ಷ ಸೌಮಿತ್ರ ಕುಮಾರ್ ಹಲ್ದಾರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಪ್ರತಿನಿಧಿ ಜೊತೆ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ 150 ದಿನಗಳ ಮುಂಗಾರಿನಲ್ಲಿ ಕೇವಲ 12 ದಿನಗಳ ಮಳೆಯಾಗಿದೆ. ಕಳೆದ ವರ್ಷದ ಸಂಕಷ್ಟದ ಪರಿಸ್ಥಿತಿಗಳಿಂದಾಗಿ ವಿವಿಧ ನದಿಗಳು ಮತ್ತು ಜಲಾಶಯಗಳ ಆರ್ದ್ರೀಕರಣ ಮಟ್ಟವನ್ನು ತಲುಪಲು ಸಮಯ ಹಿಡಿಯುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!