ದಕ್ಷಿಣ ಕನ್ನಡ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.
ಅಗ್ನಿಶಾಮಕ ದಳದ ಪ್ರಕಾರ, ಕೆಳಗಿರುವ ಮಣ್ಣು ಸಡಿಲಗೊಂಡಿತು ಮತ್ತು ಪಕ್ಕದ ಮನೆಯ ಮೇಲೆ ಗೋಡೆ ಕುಸಿದಿದೆ.
ಸ್ಥಳೀಯರ ಪ್ರಕಾರ, ಪಕ್ಕದ ಮನೆಯವರ ಗೋಡೆಯು ಸಂತ್ರಸ್ತ ಯಾಸಿರ್ ಅವರ ಮನೆಗೆ ಬಹಳ ಹತ್ತಿರದಲ್ಲಿತ್ತು ಮತ್ತು ಅದೇ ವಿಷಯವಾಗಿ ಅವರ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು.
ಘಟನೆಯ ನಂತರ ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.