ಮನೆ ಗೋಡೆ ಕುಸಿತ 
ರಾಜ್ಯ

ದಕ್ಷಿಣ ಕನ್ನಡ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.

ದಕ್ಷಿಣ ಕನ್ನಡ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.

ಅಗ್ನಿಶಾಮಕ ದಳದ ಪ್ರಕಾರ, ಕೆಳಗಿರುವ ಮಣ್ಣು ಸಡಿಲಗೊಂಡಿತು ಮತ್ತು ಪಕ್ಕದ ಮನೆಯ ಮೇಲೆ ಗೋಡೆ ಕುಸಿದಿದೆ.

ಸ್ಥಳೀಯರ ಪ್ರಕಾರ, ಪಕ್ಕದ ಮನೆಯವರ ಗೋಡೆಯು ಸಂತ್ರಸ್ತ ಯಾಸಿರ್ ಅವರ ಮನೆಗೆ ಬಹಳ ಹತ್ತಿರದಲ್ಲಿತ್ತು ಮತ್ತು ಅದೇ ವಿಷಯವಾಗಿ ಅವರ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು.

ಘಟನೆಯ ನಂತರ ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT