ಸಚಿವ ಡಾ ಜಿ ಪರಮೇಶ್ವರ್ 
ರಾಜ್ಯ

ನೀಟ್ ಪರೀಕ್ಷೆ ಅಕ್ರಮ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಸಚಿವ ಪರಮೇಶ್ವರ್

ನೀಟ್ ಅಕ್ರಮಗಳ ಬಗ್ಗೆ ಮೌನ ತಾಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಗೃಹ ಸಚಿವ ಪರಮೇಶ್ವರ್ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

ಬೆಂಗಳೂರು: ನೀಟ್ ಅಕ್ರಮಗಳ ಬಗ್ಗೆ ಮೌನ ತಾಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಗೃಹ ಸಚಿವ ಪರಮೇಶ್ವರ್ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ, ಭವಿಷ್ಯ, ಜನರ ಬಗ್ಗೆ ಕಾಳಾಜಿ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.

ಮರುಪರೀಕ್ಷೆಯಲ್ಲಿ ಕೆಲವು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬೇಕಲ್ಲವೇ... ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಲ್ಲವೇ? ಇದೆಲ್ಲವನ್ನೂ ಪ್ರಧಾನಿ ಅಥವಾ ಸಂಬಂಧಪಟ್ಟ ಸಚಿವರು ಜವಾಬ್ದಾರಿಯಿಂದ ನಿರ್ಧರಿಸಬೇಕು. ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ಪ್ರವೇಶಗಳು ಇಷ್ಟೊತ್ತಿಗೆ ಆರಂಭವಾಗಬೇಕಿತ್ತು. ಆದರೆ, ಇನ್ನೂ ಆಗಿಲ್ಲ. ಮಕ್ಕಳು ಗೊಂದಲದಲ್ಲಿದ್ದಾರೆ. ಅವರ ಭವಿಷ್ಯದ ಏನಾಗಬೇಕು ಎಂದು ಪ್ರಶ್ನಿಸಿದರು.

ತುರ್ತುಪರಿಸ್ಥಿತಿ 49 ವರ್ಷ ಆದ ಹಿನ್ನೆಲೆಯಲ್ಲಿ ಬಿಜೆಪಿಯವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿ, ದೇಶದಲ್ಲಿ ಜ್ವಲಂತ ಸಮಸ್ಯೆಗಳಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ದೇಶದಲ್ಲಿ ಬಡತನ ಇನ್ನೂ ಇದೆ. ಮತ್ತಷ್ಟು ಅಭಿವೃದ್ಧಿಯಾಗಬೇಕು, ಉದ್ಯೋಗ ಸಿಗಬೇಕಿದೆ ಎಂದು ಹೇಳಿದರು.

ನಿಗಮ-ಮಂಡಳಿ ನೇಮಕ ವಿಚಾರ ಕುರಿತು ಮಾತನಾಡಿ, ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ. ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ ಎಂದು ತಿಳಿಸಿದರು.

ಯುವತಿ ಪ್ರಬುದ್ಧ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರಗೊಂಡಿರುವ ಕುರಿತು ಮಾತನಾಡಿ, ಇದುವರೆಗೆ ನಡೆದ ತನಿಖೆಯಿಂದ ಪೋಷಕರಿಗೆ ಸಮಾಧಾನವಾಗದ ಕಾರಣ ಸಿಐಡಿ ತನಿಖೆಗೆ ಮನವಿ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!