ಭಾಗಮಂಡಲ-ನಾಪೋಕ್ಲು ರಸ್ತೆ ಮುಳುಗಿರುವುದು  
ರಾಜ್ಯ

ಕೊಡಗು ಜಿಲ್ಲೆಯಲ್ಲಿ ವರ್ಷಧಾರೆ: ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ, ನಾಪೊಕ್ಲು ರಸ್ತೆ ಸಂಪರ್ಕ ಕಡಿತ

ತ್ರಿವೇಣಿ ಸಂಗಮವು ಕಾವೇರಿ, ಕನ್ನಿಕೆ & ಸುಜೋತಿ ನದಿಗಳು ಸೇರುವ ಸ್ಥಳ. ಸಂಗಮದಲ್ಲಿ ನೀರು ಭರ್ತಿಯಾಗಿದೆ. ಹೀಗಾಗಿ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.

ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ವರುಣದೇವ ಅಬ್ಬರಿಸಿದ್ದು, ಧಾರಾಕಾರ ಮಳೆಯಾಗಿದೆ.

ಕೊಡಗಿನಲ್ಲಿ ವರ್ಷಧಾರೆ: ಕೊಡಗು ಜಿಲ್ಲೆಯಲ್ಲಿ ನಿನ್ನೆಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಜನರು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಸಂಜೆಯಿಂದಲೇ ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ವರುಣಾರ್ಭಟ ಜೋರಾಗಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರ ಭಾಗಮಂಡಲದ‌ ತ್ರಿವೇಣಿ ಸಂಗಮ ಭರ್ತಿಯಾಗಿದೆ.

ತ್ರಿವೇಣಿ ಸಂಗಮವು ಕಾವೇರಿ, ಕನ್ನಿಕೆ & ಸುಜೋತಿ ನದಿಗಳು ಸೇರುವ ಸ್ಥಳ. ಸಂಗಮದಲ್ಲಿ ನೀರು ಭರ್ತಿಯಾಗಿದೆ. ಹೀಗಾಗಿ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆರಾಯನ ಆರ್ಭಟ ಮುಂದುವರಿದಿದೆ. ಮಂಗಳೂರಿನ ಪಡೀಲು ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್‌ನಲ್ಲಿ ಮಳೆ ನೀರು ತುಂಬಿದ್ದು, ಅರ್ಧ ರಸ್ತೆಯವರೆಗೆ ಹೋಗಿ ರಸ್ತೆ ಮಧ್ಯೆಯಲ್ಲೇ ಕಾರು ನಿಂತಿದೆ. ಅಂಡರ್‌ ಪಾಸ್‌ನಲ್ಲಿ ನೀರು ತುಂಬಿರೋದ್ರಿಂದ ವಾಹನ ಸಂಚಾರ ಸ್ಥಗಿತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಮ್ಮತ್ತಿ ಗ್ರಾಮದಲ್ಲಿ ಮರ ಉರುಳಿ ಬಿದ್ದು ಕಾರು ಜಖಂಗೊಂಡಿದೆ. ಮರ ಬಿದ್ದಿದ್ದರಿಂದ ವಿದ್ಯುತ್ ಕಂಬ ಕೂಡ ತುಂಡಾಗಿ ಬಿದ್ದು ಕಾರು ಜಖಂಗೊಂಡಿದೆ. ಕೊಡಗು ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಡಿಕೇರಿ, ಪೊನ್ನಂಪೇಟೆ, ವಿರಾಜಪೇಟೆ, ಕುಶಾಲನಗರ ತಾಲೂಕಿನ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳಿಗೆ ಆಯಾ ಕ್ಷೇತ್ರಗಳ ಶಿಕ್ಷಣಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಮಡಿಕೇರಿಯಲ್ಲಿ ಮಳೆಗೆ ಹಾನಿಗೀಡಾದ ಮನೆ

ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ, ಮೂರು ಮನೆಗಳಿಗೆ ಹಾನಿ: ಬಿರುಗಾಳಿ ಸಹಿತ ಭಾರೀ ಮಳೆಗೆ ಮಡಿಕೇರಿಯ ತ್ಯಾಗರಾಜ ಕಾಲೊನಿ ಯಲ್ಲಿ ಅಲ್ಪ ಪ್ರಮಾಣದಲ್ಲಿ ಕುಸಿದು ಮೂರು ಮನೆಗಳಿಗೆ ಹಾನಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT