ಕೃಷಿ ಸಚಿವ ಚಲುವರಾಯಸ್ವಾಮಿ 
ರಾಜ್ಯ

ಹೊಸ ಸರ್ಕಾರ ಬಂದಾಗಲೆಲ್ಲ ಬೆಲೆ ಏರಿಕೆ ಸಾಮಾನ್ಯ: ಸಚಿವ ಎನ್ ಚಲುವರಾಯಸ್ವಾಮಿ

ಮಹಾರಾಷ್ಟ್ರ, ತೆಲಂಗಾಣ ಸೇರಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಮರ್ಥಿಸಿಕೊಂಡಿದ್ದಾರೆ.

ಬೆಳಗಾವಿ: ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬೆಲೆ ಏರಿಕೆ ಸಾಮಾನ್ಯ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಇತ್ತೀಚೆಗೆ ಹಾಲು ಮತ್ತು ಇಂಧನ ಬೆಲೆ ಏರಿಕೆಯಾಗುತ್ತಿರುವುದನ್ನು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರಲ್ಲಿ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಕೂಡ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹಾರಾಷ್ಟ್ರ, ತೆಲಂಗಾಣ ಸೇರಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ ಎಂದು ಹೇಳಿದರು.

ಮಳೆಗಾಲದಲ್ಲಿ ಹಾಲು ಹೆಚ್ಚು ಶೇಖರಣೆ ಆಗಲಿದ್ದು, ಹಾಗಾಗಿ, 50 ಎಂಎಲ್ ಹೆಚ್ಚು ಮಾಡಿದ್ದೇವೆ. ಎರಡು ರೂ. ದರ ಹೆಚ್ಚಿಸುವ ಜೊತೆಗೆ 50 ಎಂಎಲ್ ಹಾಲು ಕೂಡ ಹೆಚ್ಚಿಸಿದ್ದೇವೆ. ರೈತರಿಗೆ ಈಗಾಗಲೇ ಐದು ರೂಪಾಯಿ ಪ್ರೋತ್ಸಾಹಧನ ಕೊಡುತ್ತಿದ್ದೇವೆ. ಹಾಗಾಗಿ, ಹೆಚ್ಚುವರಿ ಹಣ ಕೊಡಲ್ಲ. ಹಾಲು ಹೆಚ್ಚು ಉತ್ಪಾದನೆ ಆಗ್ತಿತ್ತು ಅದನ್ನ ಕೊಳ್ಳಲು 50 ಎಂಎಲ್ ಜಾಸ್ತಿ ಮಾಡಿದ್ದೇವೆ. ಅದಕ್ಕೆ ಎರಡು ರೂಪಾಯಿ ಪಡೆಯುತ್ತಿದ್ದೇವೆಂದು ತಿಳಿಸಿದರು.

ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿ, ಹೊಸ ಸರ್ಕಾರ ಬಂದ ಮೇಲೆ ಗ್ಯಾರಂಟಿ ಕೊಟ್ಟು ಯಾವುದೇ ಅಭಿವೃದ್ಧಿ ನಿಲ್ಲಿಸಿಲ್ಲ. ಐದು ವರ್ಷ ಬಿಜೆಪಿಯವರು ಫೇಲ್ ಆಗಿದ್ದಕ್ಕೆ ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಎನ್‌ಡಿಆರ್‌ಎಫ್ ಅನುದಾನ ಕೊಡಲಿಲ್ಲ. ಸುಪ್ರೀಂ ಕೋರ್ಟ್​ಗೆ ಹೋಗಿ ನಾವು ಅನುದಾನ ತಂದಿದ್ದೇವೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲಾ, ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT