ಜಿ.ಟಿ. ದೇವೇಗೌಡ 
ರಾಜ್ಯ

ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಿ: ಶಾಸಕ ಜಿ.ಟಿ ದೇವೇಗೌಡ ಆಗ್ರಹ

ವಿವಿಧ ಜಯಂತಿಗಳಿಗೆ ನೀಡುತ್ತಿರುವ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸುವುದು ಉತ್ತಮ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಮೈಸೂರು: ವಿವಿಧ ಜಯಂತಿಗಳಿಗೆ ನೀಡುತ್ತಿರುವ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸುವುದು ಉತ್ತಮ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ, ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ವತಿಯಿಂದ ನಗರದ ಕಲಾಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಸರ್ಕಾರಿ ರಜೆಗಳು ಸಾಕಷ್ಟು ಇವೆ. ಇದರ ಜತೆಗೆ ವಿವಿಧ ಜಯಂತಿಗಳ ರಜೆಯಿಂದ ಸರ್ಕಾರಿ ಕಚೇರಿಗಳಲ್ಲಿ ಜನರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಹೀಗಾದರೆ ಜನರ ಸಮಸ್ಯೆಗಳನ್ನು ಆಲಿಸುವುದು ಯಾವಾಗ? ಬಗೆಹರಿಸುವುದು ಯಾವಾಗ? ಜಯಂತಿಯನ್ನು ಮಧ್ಯಾಹ್ನವರೆಗೆ ಆಚರಿಸಿ ಮಧ್ಯಾಹ್ನ ನಂತರ ಕೆಲಸದಲ್ಲಿ ತೊಡಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ಸಂಸ್ಥಾಪಕರಾದ ಕೆಂಪೇಗೌಡರು 55 ಬಡಾವಣೆಗಳನ್ನು ಸ್ಥಾಪಿಸಿ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕೆಂಪೇಗೌಡರ ಕೊಡುಗೆಗಳ ಬಗ್ಗೆ ಸಮುದಾಯಕ್ಕೆ ತಿಳಿಸುವ ಪ್ರಯತ್ನಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದು ಜಿಟಿಡಿ ತಿಳಿಸಿದರು.

16 ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಆಳಿದ ಕೆಂಪೇಗೌಡ ಮತ್ತು ಅವರ ವಂಶಸ್ಥರ ಬಗ್ಗೆ ಹೆಚ್ಚಿನ ಸಂಶೋಧನೆಗೆ ಕರೆ ನೀಡಿದ ಅವರು, ಯುವ ಪೀಳಿಗೆಗೆ ಕೆಂಪೇಗೌಡರನ್ನು ಪರಿಚಯಿಸಲು ಈ ವಿಷಯದ ಬಗ್ಗೆ ಅಧ್ಯಯನ ನಡೆಸಲು ತಜ್ಞರನ್ನು ಪ್ರೋತ್ಸಾಹಿಸಬೇಕು ಎಂದರು.

ಮಂಡ್ಯದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮಾರಕ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಸ್ಮಾರಕ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರೂ ಅಭಿವೃದ್ಧಿ ನಿಗಮಕ್ಕೆ ಇನ್ನೂ ಸಂಪೂರ್ಣ ಅನುದಾನ ಬಂದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT