ಆರ್. ಅಶೋಕ್ 
ರಾಜ್ಯ

ಆರ್.ಅಶೋಕ್ ವಿರುದ್ದ ಭೂ ಹಗರಣ, ಬಸ್ ಖರೀದಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ರಮೇಶ ಬಾಬು ಆಗ್ರಹ

ಬಗರ್ ಹುಕುಂ ಅಡಿಯಲ್ಲಿ ಫಲಾನುಭವಿಗಳಿಗೆ 2,500 ಎಕರೆ ಗೋಮಾಳದ ಹಂಚಿಕೆಯಲ್ಲಿ ಬಿಜೆಪಿ ನಾಯಕ ಆರ್. ಅಶೋಕ್ ಅವ್ಯವಹಾರ ನಡೆಸಿದ್ದಾರೆ ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು.

ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಫಲಾನುಭವಿಗಳಿಗೆ 2,500 ಎಕರೆ ಗೋಮಾಳದ ಹಂಚಿಕೆಯಲ್ಲಿ ಬಿಜೆಪಿ ನಾಯಕ ಆರ್. ಅಶೋಕ್ ಅವ್ಯವಹಾರ ನಡೆಸಿದ್ದಾರೆ ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ಮತ್ತು ಮಾಜಿ ಎಂಎಲ್‌ಸಿ ರಮೇಶ್ ಬಾಬು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‌ಅಶೋಕ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದಾಗ ಕೆಂಗೇರಿ ಹೋಬಳಿಯ ಬಿ.ಎಂ. ಕಾವಲಿಗೆ ಸಂಬಂಧಪಟ್ಟಂತೆ 2,500 ಎಕರೆ ಭೂಮಿ ಹಂಚಿಕೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅಶೋಕ ಅವರ ಮೇಲೆ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸುದ್ದಿ ಮಾಧ್ಯಮಗಳಲ್ಲಿ ವರದಿ ಬರಬಾರದೆಂದು ಅವರು ತಡೆಯಾಜ್ಞೆ ತಂದಿದ್ದರು. ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಉತ್ತರಿಸುವ ಶಕ್ತಿ ಅವರಿಗೆ ಇಲ್ಲ’ ಎಂದರು.

ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡುವವರು ಆರೋಪಗಳಿಂದ ಮುಕ್ತರಾಗಿರಬೇಕು. ಆದರೆ, ಅಶೋಕ ಆರೋಪ ಮುಕ್ತರಾಗಿ ಇದ್ದಾರೆಯೇ? ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ ರಮೇಶ್ ಬಾಬು, ಬಗರ್ ಹುಕುಂ ಜಮೀನು ಹಂಚಿಕೆ ಹಗರಣದ ಕುರಿತು ಕಾಂಗ್ರೆಸ್ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕರಾಗಿ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವುದು ಅಶೋಕಗೆ ಗೊತ್ತಿಲ್ಲ. ಪ್ರಬುದ್ಧತೆ, ಪಕ್ವತೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಯಾವುದೇ ವಿಚಾರದ ಬಗ್ಗೆ ಇವರಿಗೆ ಸ್ಪಷ್ಟತೆ ಇಲ್ಲವಾಗಿದೆ. ಅಸಮರ್ಥ ನಾಯಕನನ್ನು ಬಿಜೆಪಿ ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದೆ ಎಂದು ದೂರಿದರು.

ಅಶೋಕ ಅವರು ಸಾರಿಗೆ ಸಚಿವರಾಗಿದ್ದಾಗ ರಾಷ್ಟ್ರೀಯ ನಗರ ನವೀಕರಣ ಮಿಷನ್ ಅಡಿಯಲ್ಲಿ 143 ಮಾರ್ಕೊಪೋಲೊ ಬಸ್‌ಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಾಬು ಒತ್ತಾಯಿಸಿದರು. ಆರೋಪಕ್ಕೆ ಸಂಬಂಧಿಸಿದಂತೆ ಅವರು ಇಲ್ಲಿಯವರೆಗೆ ಪ್ರತಿಕ್ರಿಯಿಸಿಲ್ಲ" ಎಂದು ಅವರು ಹೇಳಿದರು.

ಜಮೀನು ಡಿನೋಟಿಫಿಕೇಷನ್‌ಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅವರು ಸಿಲುಕಿಕೊಂಡಿದ್ದರು ಆದರೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ನಂತರ ಭೂಮಿಯನ್ನು ಹಿಂದಿರುಗಿಸಲಾಯಿತು ಎಂದು ಬಾಬು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT