ಅಪಘಾತ 
ರಾಜ್ಯ

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆಂಬ್ಯುಲೆನ್ಸ್-ಬೈಕ್ ಡಿಕ್ಕಿ; ಮೂವರ ದುರ್ಮರಣ

ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಶಿವಮೊಗ್ಗ: ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಮೃತ ದುರ್ದೈವಿಗಳು. ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ.

ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ಮುಂಜಾನೆ ಹಾವೇರಿ ಜಿಲ್ಲೆಯ ಗುಡ್ಡೇನಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿತ್ತು. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT