ನವಜಾತ ಶಿಶು(ಸಾಂಕೇತಿಕ ಚಿತ್ರ) 
ರಾಜ್ಯ

ಬೆಂಗಳೂರು: ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ!

ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್‌ ರೈಲಿನ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ಜೂನ್ 26ರಂದು ಮುಂಜಾನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗು ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪರಾರಿಯಾಗಿದ್ದಾರೆ. ಮಹಿಳೆಗೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ಬಿಳಿ ಬಟ್ಟೆಯಲ್ಲಿ ನವಜಾತ ಗಂಡು ಮಗುವನ್ನು ಸುತ್ತಿ ಡಸ್ಟ್ ಬಿನ್​ಗೆ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ.

ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರೈಲು ಬೆಳಗ್ಗೆ 11 ಗಂಟೆ ಸುಮಾರಿಗೆ ಯಲಹಂಕ ತಲುಪಿದಾಗ, ಪೊಲೀಸರು ಭ್ರೂಣವನ್ನು ಹೊರತೆಗೆದು ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಿದರು. ಸ್ವಲ್ಪ ಸಮಯದ ನಂತರ ರೈಲು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಯಾರು ಕೃತ್ಯ ಎಸಗಿದ್ದರೂ ತಕ್ಷಣ ಗುರುತಿಸುವುದು ತುಂಬಾ ಕಷ್ಟ. ನಾವು ರೈಲು ಕಾರ್ಯಾಚರಣೆಯನ್ನು ತಡೆಹಿಡಿಯಲಾಗುವುದಿಲ್ಲ. ಇದರಿಂದ ಉಳಿದ ರೈಲುಗಳ ಕಾರ್ಯಾಚರಣೆಗೆ ಸಮಸ್ಯೆ ಎದುರಾಗಲಿದೆ ಎಂದು ಅಧಿಕಾರಿಗಳು ಹೇಳಿದರು.

ಇದೀಗ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 318 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!