ನವಜಾತ ಶಿಶು(ಸಾಂಕೇತಿಕ ಚಿತ್ರ) 
ರಾಜ್ಯ

ಬೆಂಗಳೂರು: ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ!

ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್‌ ರೈಲಿನ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ಜೂನ್ 26ರಂದು ಮುಂಜಾನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗು ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪರಾರಿಯಾಗಿದ್ದಾರೆ. ಮಹಿಳೆಗೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ಬಿಳಿ ಬಟ್ಟೆಯಲ್ಲಿ ನವಜಾತ ಗಂಡು ಮಗುವನ್ನು ಸುತ್ತಿ ಡಸ್ಟ್ ಬಿನ್​ಗೆ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ.

ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರೈಲು ಬೆಳಗ್ಗೆ 11 ಗಂಟೆ ಸುಮಾರಿಗೆ ಯಲಹಂಕ ತಲುಪಿದಾಗ, ಪೊಲೀಸರು ಭ್ರೂಣವನ್ನು ಹೊರತೆಗೆದು ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಿದರು. ಸ್ವಲ್ಪ ಸಮಯದ ನಂತರ ರೈಲು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಯಾರು ಕೃತ್ಯ ಎಸಗಿದ್ದರೂ ತಕ್ಷಣ ಗುರುತಿಸುವುದು ತುಂಬಾ ಕಷ್ಟ. ನಾವು ರೈಲು ಕಾರ್ಯಾಚರಣೆಯನ್ನು ತಡೆಹಿಡಿಯಲಾಗುವುದಿಲ್ಲ. ಇದರಿಂದ ಉಳಿದ ರೈಲುಗಳ ಕಾರ್ಯಾಚರಣೆಗೆ ಸಮಸ್ಯೆ ಎದುರಾಗಲಿದೆ ಎಂದು ಅಧಿಕಾರಿಗಳು ಹೇಳಿದರು.

ಇದೀಗ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 318 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT