ಜಿ.ಎಸ್. ಸಂಗ್ರೇಶಿ 
ರಾಜ್ಯ

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ

ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ (ಜಿ.ಎಸ್. ಸಂಗ್ರೇಶಿ) ಅವರನ್ನು ನೇಮಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಇದೀಗ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ.ಎಸ್ ಸಂಗ್ರೇಶಿ ಅವರು ನಿಯೋಜನೆ ಮೇರೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಗುರುವಾರ ಹೊರಡಿಸಲಾಗಿತ್ತು.

ಒಂದೇ ದಿನಕ್ಕೆ ಆ ಆದೇಶವನ್ನು ಹಿಂಪಡೆದು, ಅದರ ಬದಲಾಗಿ ಸಂಗ್ರೇಶಿ ಅವರನ್ನು ಕರ್ನಾಟಕ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಅವರ ಅಧಿಕಾರದ ಅವಧಿ ಮುಂದಿನ ಐದು ವರ್ಷಗಳವರೆಗೆ ಇರುತ್ತದೆ.

ರಾಜ್ಯ ಚುನಾವಣಾ ಆಯೋಗವು ಜಿಪಂ-ತಾ.ಪಂ.ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಸುವ ಹೊಣೆ ಹೊತ್ತಿದ್ದು, ನ್ಯಾಯಾಲಯಗಳಿಂದ ಚುನಾವಣೆ ನಡೆಸಲು ಸರ್ಕಾರಜ ಮೇಲೆ ಒತ್ತಡ ಹೆಚ್ಚಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT