ಕೆಎಸ್ ಆರ್ ಟಿಸಿ ಬಸ್ 
ರಾಜ್ಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ KSRTC ಬಸ್; 8 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ್ದ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ್ದ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರ ಬಸ್ ಡಿವೈಡರ್ ​ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ.

ಘಟನೆಯಲ್ಲಿ ಬಸ್‌ ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿತವಾಗಿದೆ. ಗಾಯಾಳುಗಳಿಗೆ ಮಂಡ್ಯ,‌ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ 30 ಜನ ಇದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್​​ಗಳು ಜಖಂಗೊಂಡಿದೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT