ಲೋಕಾಯುಕ್ತ (ಸಂಗ್ರಹ ಚಿತ್ರ) 
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ BBMPಯಲ್ಲೂ ಬಹುಕೋಟಿ ಹಗರಣ: 9 ಅಧಿಕಾರಿಗಳ ವಿರುದ್ಧ ದೂರು ದಾಖಲು; ಪಾಲಿಕೆಗೆ ಲೋಕಾಯುಕ್ತ ಪತ್ರ!

ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಂತೆಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ ನಡೆದಿದೆ ಎನ್ನಲಾಗಿದೆ.

ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಮೂಲಗಳು ತಿಳಿಸಿವೆ.

ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಕೊರೋನಾ ಸಮಯದಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಅಕ್ರಮ ಹಣ ವರ್ಗಾವಣೆ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ 2020ರಿಂದ 2021ರ ನಡುವೆ ಈ ಬಹುಕೋಟಿ ಹಗರಣ ನಡೆದಿದ್ದು, ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.

ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಎಂದು ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬಯಲಾಗಿದೆ.

ಸುಬೇಶ್, ಎಸ್.ಎಸ್. ದೇವಕಿ, ಬಿ.ಗಾಯತ್ರಿ, ಜಿ.ಎನ್. ಸುಬ್ಬರಾಮಯ್ಯ, ಎಸ್.ವಿ.ಗಿರಿಯಪ್ಪ, ಎನ್.ಗೀತಾ, ಕುಮಾರಿ ಕುಸುಮಾ, ಲಿಂಗಣ್ಣ ಗುಂಡಳ್ಳಿ, ಸತ್ಯಮೂರ್ತಿ. ಇವರು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಹಣ ದುರುಪಯೋಗ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ, ಯಾವ ಆಧಾರದಲ್ಲಿ ಆರೋಪ ಮಾಡಲಾಗಿದೆ ಎಂಬುದನ್ನು ನೋಡಬೇಕಿದೆ. ಲೋಕಾಯುಕ್ತರು ನಮ್ಮಿಂದ ವರದಿ ಕೇಳಿದ್ದಾರೆ . ನಾವು ಅದನ್ನು ನೀಡುತ್ತೇವೆ. ಅವರಿಗೆ ತೃಪ್ತಿ ಇಲ್ಲದಿದ್ದರೆ ಈ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸಬಹುದು. ತನಿಖೆಗೆ ನಾವು ಒಪ್ಪಿಗೆ ನೀಡಬೇಕಿದೆ ಎಂದು ಹೇಳಿದರು.

ಈ ಬೆಳವಣಿಗೆ ಮುಖ್ಯಮಂತ್ರಿ (ಸಿಎಂ) ಕಚೇರಿಯನ್ನೂ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿ ಕೂಡ ಸೋಮವಾರದೊಳಗೆ ಬಿಬಿಎಂಪಿಯಿಂದ ವರದಿ ಕೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT