ಡಿ.ಕೆ ಶಿವಕುಮಾರ್ 
ರಾಜ್ಯ

ಪ್ರಧಾನಿ ಅವರಿಂದ ಕರ್ನಾಟಕದ ಬೇಡಿಕೆಗಳ ಬಗ್ಗೆ ಪರಿಶೀಲನೆ ಭರವಸೆ: ಡಿಸಿಎಂ ಡಿ‌.ಕೆ ಶಿವಕುಮಾರ್

ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು.

ಬೆಂಗಳೂರು: ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು ಎಂದರು.

ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು ಎಂದು ಹೇಳಿದರು. ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದರು.

ಬೆಂಗಳೂರಿನ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಲಾಯಿತೇ ಎಂದು ಕೇಳಿದಾಗ "ಜಲಸಂಪನ್ಮೂಲ, ನಗರಾಭಿವೃದ್ಧಿ, ಫೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇನ್ನೊಮ್ಮೆ ಕೆಲವು ಮಾಹಿತಿಗಳ ಜತೆ ಬನ್ನಿ ಎಂದು ತಿಳಿಸಿದ್ದಾರೆ‌. ಮಂತ್ರಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಒಟ್ಟಾರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ನೀವು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ" ಎಂದರು.

ಜುಲೈ 3 ರ ನಂತರ ರಾಹುಲ್ ಗಾಂಧಿ ಅವರ ಭೇಟಿ

ರಾಹುಲ್ ಗಾಂಧಿ ಅವರ ಭೇಟಿಯ ಬಗ್ಗೆ ಕೇಳಿದಾಗ "ಶನಿವಾರ ಸಂಜೆ ದೆಹಲಿಗೆ ಬಂದ ಕಾರಣ ಭೇಟಿ ಸಾಧ್ಯವಾಗಲಿಲ್ಲ. ಸಂಸತ್ ಅಧಿವೇಶನ ಮುಗಿದ ನಂತರ ಜುಲೈ 3 ರ ನಂತರ ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಗುವುದು. ಶನಿವಾರ ಮಧ್ಯಾಹ್ನ ಕರ್ನಾಟಕದ ನಾಯಕರ ಭೇಟಿಗೆ ಸಮಯ ನಿಗದಿ ಆಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಭೇಟಿಯಾಗಲು ಆಗಲಿಲ್ಲ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT