ಗಿರೀಶ್ ಬಾಬು ಚಕ್ರ ಮತ್ತು ಉಮೇಶ್ ಜಾಧವ್ 
ರಾಜ್ಯ

ಕಲಬುರಗಿ: ಕಣ್ಣಿಗೆ ಖಾರದ ಪುಡಿ ಎರಚಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬಂಟನ ಬರ್ಬರ ಹತ್ಯೆ!

ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ

ಕಲಬುರಗಿ: ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ

ಗಿರೀಶ್ ಬಾಬು ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.

ಇತ್ತೀಚೆಗಷ್ಟೇ ಗಿರೀಶ್ ಬಾಬು ಅವರನ್ನು ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿತ್ತು. ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಹತ್ಯೆಗೈಯಲಾಗಿದೆ. ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ಮೃತ ಬಿಜೆಪಿ ಮುಖಂಡ ಗರೀಶ್‌ ಚಕ್ರ ಸಹೋದರ ಸದಾಶಿವ ಚಕ್ರ ಕಿಡಿಕಾರಿದ್ದಾರೆ.

ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ. ರಾತ್ರಿ 10 ಗಂಟೆಗೆ ಸಚಿನ್ ಹಾಗೂ ಸ್ನೇಹಿತರು ಸನ್ಮಾನ‌ ಮಾಡುವುದಾಗಿ ಕರೆದುಕೊಂಡು ಹೋಗಿದ್ದರು. ಕೊಲೆಗೂ‌ ಮುನ್ನಾ ಸನ್ಮಾನ ಮಾಡಿ ನಂತರ ಅತನನ್ನು‌ ಕೊಲೆ ಮಾಡಲಾಗಿದೆ. ನನ್ನ ತಮ್ಮನ‌ ಕೊಲೆಗೆ ಸುಪಾರಿ ನೀಡಿದವರ ಹೆಸರು ಪೊಲೀಸರ ಮುಂದೆ ಹೇಳುತ್ತೇನೆ ಎಂದರು. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!