ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತಿತರರು ANI
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ, ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ- ಡಿಕೆ ಶಿವಕುಮಾರ್

'ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ' ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಬೆಂಗಳೂರಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ವೈಟ್ ಪೀಲ್ಡ್ ನಲ್ಲಿರುವ ಜನಪ್ರಿಯ ಹೋಟೆಲ್ ಗಳಲ್ಲಿ ಒಂದಾದ 'ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ' ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಬೆಂಗಳೂರಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರೊಂದಿಗೆ ರಾಮೇಶ್ವರಂ ಕೆಫೆಗೆ ತೆರಳಿ, ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮಧ್ಯಾಹ್ನ 12ರ ಸುಮಾರಿಗೆ 30 ವರ್ಷದ ಯುವಕನೊಬ್ಬ ಬ್ಯಾಗ್ ತಂದಿಟ್ಟಿದ್ದು, ನಂತರ ಟೋಕನ್ ಪಡೆದು ರವೆ ಇಡ್ಲಿ ಸೇವಿಸಿ ಹೋಗಿದ್ದಾನೆ. ಟೈಮರ್ ಬಳಸಿ ಮಧ್ಯಾಹ್ನ 12-55ರ ಸುಮಾರಿಗೆ ಕಡಿಮೆ ತೀವ್ರತೆ ಬಾಂಬ್ ಸ್ಫೋಟಿಸಲಾಗಿದೆ. ಇದರಿಂದಾಗಿ ಗ್ರಾಹಕರು, ಸಿಬ್ಬಂದಿ ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.

ಕೆಫೆಯಲ್ಲಿ ಬ್ಯಾಗ್ ತಂದಿಟ್ಟ ಯುವಕನ ಚಹರೆ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಆತನ ಪತ್ತೆಗಾಗಿ 7-8 ಸಿಸಿಬಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಆರೋಪಿತ ಯುವಕನನ್ನು ಬಂಧಿಸಲಿದ್ದಾರೆ. ಬೆಂಗಳೂರು ನಗರ ಸುರಕ್ಷಿತವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT