ಸಂಗ್ರಹ ಚಿತ್ರ 
ರಾಜ್ಯ

ನಾನ್ಯಾವ ಜಾತಿ? ಮಾಹಿತಿ ಪಡೆಯಲು ಯಾರೂ ನನ್ನ ಬಳಿ ಬಂದಿಲ್ಲ: ಸಿದ್ದಗಂಗಾ ಶ್ರೀ

ಎಲ್ಲರ ಬಳಿಯೂ ಹೋಗಿ ಸಮೀಕ್ಷೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಬಳಿ ಸಮೀಕ್ಷೆಗೆ ಯಾರೂ ಬಂದಿಲ್ಲ ಎಂದು ಸಿದ್ದಂಗಾ ಮಠದ ಸಿದ್ದಲಿಂಗ ಶ್ರೀಗಳು ಗುರುವಾರ ಹೇಳಿದ್ದಾರೆ.

ತುಮಕೂರು: ಎಲ್ಲರ ಬಳಿಯೂ ಹೋಗಿ ಸಮೀಕ್ಷೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಬಳಿ ಸಮೀಕ್ಷೆಗೆ ಯಾರೂ ಬಂದಿಲ್ಲ ಎಂದು ಸಿದ್ದಂಗಾ ಮಠದ ಸಿದ್ದಲಿಂಗ ಶ್ರೀಗಳು ಗುರುವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಗುರುವಾರ ಜಾತಿ ಸಮೀಕ್ಷಾ ವರದಿ ಸ್ವೀಕಾರ ಮಾಡಿದ ವಿಚಾರಕ್ಕೆ ಸಿದ್ಧಗಂಗಾ ಮಠದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಏಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತದೆ. ವೈಜ್ಞಾನಿಕವಾಗಿ ಆಗಿಲ್ಲ, ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿಬರುತ್ತಿದೆ ಎಂದು ಹೇಳಿದರು.

ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ. ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನು ವಿಚಾರಿಸಿ ವರದಿ ಮಾಡಿದರೆ ಸೂಕ್ತ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತಿಯೊಬ್ಬರನ್ನು ಕೇಳುತ್ತಾರಾ? ಅಥವಾ ಸಮಾಜದ ಮುಖಂಡರನ್ನ ಮಾತ್ರ ಕೇಳುತ್ತಾರಾ? ಏನು ಎಂಬುದು ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಮಾತನಾಡುವುದಕ್ಕೆ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಂತಹ ವರದಿ ಸ್ವೀಕಾರ ಆಗಲಿ. ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT