ಬಸವರಾಜ ಬೊಮ್ಮಾಯಿ 
ರಾಜ್ಯ

ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆ ಅಗತ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ಜಾತಿ ಗಣತಿ ವರದಿಯು ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ಜಾತಿ ಗಣತಿ ವರದಿಯು ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಜಾತಿ ಗಣತಿಯನ್ನು ಯಾರು ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ನಾಲ್ಕೈದು ಅರ್ಜಿಗಳು ಬಾಕಿ ಉಳಿದಿವೆ ಎಂದರು.

'ಸದ್ಯದ ವರದಿಯಲ್ಲಿ, ಕೆಲವು ಉಪಜಾತಿಗಳನ್ನು ಮುಖ್ಯ ಜಾತಿಗಳಿಂದ ಪ್ರತ್ಯೇಕಿಸಲಾಗಿದೆ. ರಾಜ್ಯ ಸರ್ಕಾರ ವರದಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ವರದಿಯ ಬಗ್ಗೆ ಸಾರ್ವಜನಿಕ ಚರ್ಚೆಯಾಗಬೇಕು. ಬಿಜೆಪಿ ಹಿಂದುಳಿದ ವರ್ಗಗಳ ವಿರುದ್ಧವಿಲ್ಲ, ಆದರೆ ಜನಸಂಖ್ಯೆಯ ಆಧಾರದ ಮೇಲೆ ಎಲ್ಲರಿಗೂ ನ್ಯಾಯ ನೀಡಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವರದಿಯನ್ನು ರಾಜಕೀಯಕ್ಕೆ ಬಳಸಬಾರದು' ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಗುರುವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗದ ಅವಧಿ ಇಂದಿಗೆ ಮುಕ್ತಾಯವಾಗಿದೆ.

ಎಚ್‌ಎ ಕಾಂತರಾಜ್ ನೇತೃತ್ವದ ಆಯೋಗ ಸಿದ್ಧಪಡಿಸಿದ ವರದಿಯ ದತ್ತಾಂಶವನ್ನು ಬಳಸಿಕೊಂಡು ಈ ಆಯೋಗವು ಪರಿಷ್ಕೃತ ವರದಿಯನ್ನು ಸಿದ್ಧಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT