ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್(ಸಂಗ್ರಹ ಚಿತ್ರ) 
ರಾಜ್ಯ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ

ಕರಾವಳಿ ಭಾಗದಲ್ಲಿ ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್

ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64 ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ.

ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ ಮುಖ್ಯಸ್ಥರಾಗಿದ್ದ ಮನೋಹರ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಅರಸಿ ಬಂದಿದ್ದವು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT