ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜ್ಯ

ರಾಜ್ಯದ ಜನರ ತಲಾ ಆದಾಯದಲ್ಲಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾಸನ :ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿಂದು ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ದೇಶದಲ್ಲಿ ಶೇ.18 ರಷ್ಟು ಜಿಡಿಪಿ ಬೆಳವಣಿಗೆಯಾಗಿ, ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ. ಈ ಬೆಳವಣಿಗೆ ಗ್ಯಾರಂಟಿ ಯೋಜನೆಗಳ ಫಲ ಎಂಬುದನ್ನು ಅಂಕಿ ಅಂಶಗಳೇ ತೋರಿಸುತ್ತವೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಖಾತೆಗೆ ಬಂದ ಹಣದಿಂದಾಗಿ ಅವರಲ್ಲಿ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿದೆ. ಇದರ ಒಟ್ಟು ಪರಿಣಾಮ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ.

ಮಹಿಳೆಯರು, ರೈತರು, ಕಾರ್ಮಿಕರು, ಹಿಂದುಳಿದವರು, ದುಡಿಯುವವರು, ಶ್ರಮಿಕರು ಎಲ್ಲರಿಗೂ ಅನುಕೂಲ ಆಗುವ ಜಾತಿ, ಧರ್ಮದ ಮಿತಿ ಇಲ್ಲದ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಈ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾನಾ ನಾಟಕಗಳನ್ನು ಸೃಷ್ಟಿಸುತ್ತಿದೆ, ಭರ್ಜರಿ ನಾಟಕ ಆಡುತ್ತಿದೆ. ಬಿಜೆಪಿಯ ಟೀಕೆ, ನಾಟಕಗಳಿಗೆ ಮರುಳಾಗಬೇಡಿ ಎಂದು ಜನರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ, ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಏರ್ ಪೋರ್ಟ್ ನಿರ್ಮಾಣಕ್ಕೆ ರಾಜ್ಯದ ಪಾಲಿನ ಹಣವನ್ನು ನಿರಂತರವಾಗಿ ನೀಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶ ಕೊಡದೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT