ವೃದ್ಧ ದಂಪತಿ ಮೇಲೆ ಹಲ್ಲೆ 
ರಾಜ್ಯ

ಮಂಗಳೂರು: ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಚರ್ಚ್ ಪಾದ್ರಿ ಧಾರ್ಮಿಕ ಸೇವೆಯಿಂದ ವಜಾ

ದಕ್ಷಿಣ ಕನ್ನಡದ ಪರಿಯಲ್ತಡ್ಕ ಗ್ರಾಮದಲ್ಲಿ ಚರ್ಚ್ ಪಾದ್ರಿಯೊಬ್ಬರು ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳೂರು: ದಕ್ಷಿಣ ಕನ್ನಡದ ಪರಿಯಲ್ತಡ್ಕ ಗ್ರಾಮದಲ್ಲಿ ಚರ್ಚ್ ಪಾದ್ರಿಯೊಬ್ಬರು ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪರಿಯಲ್ತಡ್ಕದ ಮಣೆಲದಲ್ಲಿರುವ ಕ್ರೈಸ್ಟ್ ದಿ ಕಿಂಗ್ ಪ್ಯಾರಿಷ್‌ನ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ ಅವರು ಫೆಬ್ರವರಿ 29 ರಂದು ಆಶೀರ್ವಾದಕ್ಕಾಗಿ ವೃದ್ಧ ದಂಪತಿ ತಮ್ಮ ಮನೆಗೆ ಬಂದಾಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದಂಪತಿ ಗ್ರೆಗೊರಿ ಮತ್ತು ಫಿಲೋಮಿನಾ ಮತ್ತು ಪಾದ್ರಿಯ ನಡುವೆ ಭಿನ್ನಾಭಿಪ್ರಾಯಗಳಿದ್ದವು ಮತ್ತು ಅವರ ಮನೆಗೆ ಭೇಟಿ ನೀಡಿದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪಾದ್ರಿ ದಂಪತಿಗಳ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಹಲ್ಲೆ ಸಂಬಂಧ ದೃದ್ಧ ದಂಪತಿ ದೂರು ನೀಡಿದ್ದಾರೆ. ಆದರೆ ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ಘಟನೆಯಿಂದ ತೀವ್ರ ದುಃಖವಾಗಿದ್ದು, ತಕ್ಷಣದ ಪ್ರತಿಕ್ರಿಯೆಯಾಗಿ ಸಂಬಂಧಪಟ್ಟ ಪಾದ್ರಿಯನ್ನು ಕ್ರೈಸ್ಟ್ ಕಿಂಗ್ ಚರ್ಚ್‌ನ ಧಾರ್ಮಿಕ ಸೇವೆಯಿಂದ ವಜಾಗೊಳಿಸಲಾಗುವುದು ಮತ್ತು ಆಧ್ಯಾತ್ಮಿಕ ಅಗತ್ಯಗಳಿಗೆ ಸೇವೆ ಸಲ್ಲಿಸಲು ಬೇರೆಯವರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

"ಧರ್ಮಾಧಿಕಾರವು ಪೊಲೀಸರೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತದೆ ಮತ್ತು ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾದ ವಿಚಾರಣೆಯ ಹೊರತಾಗಿ, ಮಂಗಳೂರು ಧರ್ಮಪ್ರಾಂತ್ಯವು ನ್ಯಾಯಯುತವಾಗಿ ವಿಚಾರಣೆಯನ್ನು ಸಹ ಪ್ರಾರಂಭಿಸುತ್ತದೆ" ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT