ಸ್ಫೋಟ ಸಂಭವಿಸಿದ ಕೆಫೆಗೆ ಸಿಎಂ ಸಿದ್ಧರಾಮಯ್ಯ ಭೇಟಿ 
ರಾಜ್ಯ

ಸ್ಫೋಟ ಪ್ರಕರಣದ ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಸ್ಫೋಟ ಪ್ರಕರಣದ ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಮತ್ತು ಘಟನೆಯ "ಸಂಪೂರ್ಣ ಸತ್ಯ" ಹೊರಬರುವಂತೆ ನೋಡಿಕೊಳ್ಳಬೇಕು.

ಬೆಂಗಳೂರು: ನಗರದ ಉಪಾಹಾರ ಗೃಹದಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣದ ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಮತ್ತು ಘಟನೆಯ "ಸಂಪೂರ್ಣ ಸತ್ಯ" ಹೊರಬರುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದ್ದಾರೆ.

ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಗೃಹ ಇಲಾಖೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಮಾಜಘಾತುಕ ಶಕ್ತಿಗಳ ವಿರುದ್ಧ ಯಾವುದೇ ಅನುಕಂಪವಿಲ್ಲದೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜನನಿಬಿಡ ಸ್ಥಳಗಳನ್ನು ಗುರುತಿಸಿ, ಅಂತಹ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಜನರಿಗೆ ಭದ್ರತೆ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಚೇರಿಯಿಂದ ಹೊರಡಿಸಿದ ಪ್ರಕಟಣೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪೂರ್ವ ಬೆಂಗಳೂರಿನ ಐಟಿ ಕಾರಿಡಾರ್‌ನಲ್ಲಿರುವ ಬ್ರೂಕ್‌ಫೀಲ್ಡ್ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಹತ್ತು ಮಂದಿ ಗಾಯಗೊಂಡ ನಂತರ ಈ ಉನ್ನತ ಮಟ್ಟದ ಸಭೆ ನಡೆದಿದೆ.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ದಾರಿ ತಪ್ಪಿಸುವ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಮತ್ತು ಸಮಾಜಘಾತುಕ ಶಕ್ತಿಗಳ ವಿರುದ್ಧ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ, ನಂತರ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!