ಕ್ಯಾನ್ಸರ್‌ ಪೀಡಿತ ಬಾಲಕನ IPS ಕನಸು ನನಸು  
ರಾಜ್ಯ

ಕ್ಯಾನ್ಸರ್‌ ಪೀಡಿತ ಬಾಲಕನ IPS ಕನಸು ನನಸು ಮಾಡಿದ ಬೆಂಗಳೂರು ಪೊಲೀಸರು!

ಕ್ಯಾನ್ಸರ್‌ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಮೋಸಿನ್ ರಾಜ್‌ ಎಂಬ 13 ವರ್ಷದ ಬಾಲಕ ಐಪಿಎಸ್ ಅಧಿಕಾರಿಯಾಗುವ ಕನಸು ಹೊಂದಿದ್ದ. ಆದರೆ, ಚಿಕ್ಕ ವಯಸ್ಸಿನಲ್ಲೇ ಮಾರಕ ಕ್ಯಾನ್ಸರ್‌ಗೆ ತುತ್ತಾಗಿದ್ದರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಂಸ್ಥೆ, ಪೊಲೀಸರೊಂದಿಗೆ ಮಾತನಾಡಿ ಬಾಲಕನ ಆಸೆ ಈಡೇರಲು ಸಹಕರಿಸಿವೆ.

ಬಾಲಕನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ವಿಭಾಗದ ಪ್ರಭಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರು ಒಂದು ದಿನದ ಮಟ್ಟಿಗೆ ಬಾಲಕನಿಗೆ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟು, ಮಾನವೀಯತೆ ಮೆರೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್‌ಗೆ ತುತ್ತಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ (cancer-stricken boy) ಕನಸು ಈಡೇರಲು ನೆರವಾದ ಪೊಲೀಸರ ಬಗ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT