ಕ್ಯಾನ್ಸರ್‌ ಪೀಡಿತ ಬಾಲಕನ IPS ಕನಸು ನನಸು  
ರಾಜ್ಯ

ಕ್ಯಾನ್ಸರ್‌ ಪೀಡಿತ ಬಾಲಕನ IPS ಕನಸು ನನಸು ಮಾಡಿದ ಬೆಂಗಳೂರು ಪೊಲೀಸರು!

ಕ್ಯಾನ್ಸರ್‌ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಮೋಸಿನ್ ರಾಜ್‌ ಎಂಬ 13 ವರ್ಷದ ಬಾಲಕ ಐಪಿಎಸ್ ಅಧಿಕಾರಿಯಾಗುವ ಕನಸು ಹೊಂದಿದ್ದ. ಆದರೆ, ಚಿಕ್ಕ ವಯಸ್ಸಿನಲ್ಲೇ ಮಾರಕ ಕ್ಯಾನ್ಸರ್‌ಗೆ ತುತ್ತಾಗಿದ್ದರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಂಸ್ಥೆ, ಪೊಲೀಸರೊಂದಿಗೆ ಮಾತನಾಡಿ ಬಾಲಕನ ಆಸೆ ಈಡೇರಲು ಸಹಕರಿಸಿವೆ.

ಬಾಲಕನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ವಿಭಾಗದ ಪ್ರಭಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರು ಒಂದು ದಿನದ ಮಟ್ಟಿಗೆ ಬಾಲಕನಿಗೆ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟು, ಮಾನವೀಯತೆ ಮೆರೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್‌ಗೆ ತುತ್ತಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ (cancer-stricken boy) ಕನಸು ಈಡೇರಲು ನೆರವಾದ ಪೊಲೀಸರ ಬಗ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್

ಸರಿಯಾದ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ: ಚುನಾವಣಾ ಭರವಸೆಗಳ ಈಡೇರಿಕೆ, ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಬೇಕು- ಸಿದ್ದರಾಮಯ್ಯ

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...

ಪಕ್ಕದ್ಮನೆ ಆಂಟಿ ಜೊತೆ ಹರಟೆ, ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು, CCTVಯಲ್ಲಿ ಬೆಚ್ಚಿಬೀಳಿಸುವ Video