ರಾಮೇಶ್ವರಂ ಕೆಫೆ 
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ

ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ 10 ಜನರ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ 10 ಜನರ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವರ್ಣಾಂಬ ಎಂಬ ಈ ಮಹಿಳೆ ನಗರದ ಐಟಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಸ್ವರ್ಣಾಂಬಾ ಅವರ ಮುಖ, ಕೈ, ಕಾಲುಗಳು ಮತ್ತು ತೊಡೆಯ ಭಾಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಆಕೆಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದ್ದು, ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಬ್ರೂಕ್‌ಫೀಲ್ಡ್ ಆಸ್ಪತ್ರೆಯ ಜನರಲ್ ಮೆಡಿಸಿನ್ ಕನ್ಸಲ್ಟೆಂಟ್ ಡಾ. ಟಿ.ಜೆ. ಪ್ರದೀಪ್ ಕುಮಾರ್ ತಿಳಿಸಿದ್ದಾರೆ. ಅವರಲ್ಲದೇ, ಫಾರೂಖ್ ಹುಸೇನ್ (19) ಮತ್ತು ದ್ವೀಪಾಂಶು (23) ಎಂಬವರನ್ನು ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಫಾರೂಖ್ ರಾಮೇಶ್ವರಂ ಕೆಫೆಯಲ್ಲಿ ಉದ್ಯೋಗಿಯಾಗಿದ್ದರೆ ದ್ವೀಪಾಂಶು ಐಟಿ ಉದ್ಯೋಗಿಯಾಗಿದ್ದಾರೆ. ಮೂವರಿಗೂ ಕಿವಿಗಳಿಗೆ ಗಾಯಗಳಾಗಿವೆ ಎಂದು ಡಾ.ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

ಫಾರೂಖ್‌ ಅವರಿಗೂ ಗಾಯಗಳಾಗಿವೆ. “ಎಕ್ಸರೇ ತೆಗೆಯಲಾಗಿದೆ. ಆದರೆ ಅವರ ಚರ್ಮಕ್ಕೆ ನುಗ್ಗಿದ ವಸ್ತುಗಳು ಯಾವುವು ಎಂದು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ದ್ವೀಪಾಂಶುವಿನ ಕಿವಿಗೂ ಗಾಯಗಳಾಗಿದ್ದು, ಅವರು ಆಡಿಯೊಮೆಟ್ರಿ ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ. ಎಲ್ಲಾ ರೋಗಿಗಳು ಆಘಾತದ ಸ್ಥಿತಿಯಲ್ಲಿದ್ದಾರೆ ಎಂದು ಡಾ ಕುಮಾರ್ ಹೇಳಿದರು.

“ಗಾಯಗಳ ಪ್ರಕಾರವನ್ನು ನೋಡಿದಾಗ, ಇದು ಕಡಿಮೆ-ತೀವ್ರತೆಯ ಸ್ಫೋಟ ಎಂದು ಶಂಕಿಸಲಾಗಿದೆ. ಸ್ಫೋಟದಲ್ಲಿ ಯಾವುದೇ ದ್ರವವನ್ನು ಬಳಸಲಾಗಿಲ್ಲ. ರಾಸಾಯನಿಕಗಳ ಬಳಕೆ ಮಾಡಿರುವಂತೆ ಕಂಡುಬಂದಿದೆ. ಗಾಯಗೊಂಡವರು ಧರಿಸಿರುವ ಉಡುಪಿನ ಮಾದರಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸರು ಮತ್ತು ಎಫ್‌ಎಸ್‌ಎಲ್ ತಂಡಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಇತರ ಗಾಯಾಳುಗಳಾದ ಮೋಹನ್ (41), ನಾಗಶ್ರೀ (35), ಮೌಮಿ (30), ಬಲರಾಮ ಕೃಷ್ಣ (31), ನವ್ಯಾ (25), ಮತ್ತು ಶ್ರೀನಿವಾಸ್ (67) ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಗಾಯಗೊಂಡ ಹತ್ತನೇ ವ್ಯಕ್ತಿಯ ವಿವರಗಳು ಪೊಲೀಸರಿಂದ ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT