ಕಟ್ಟಡ ನಿರ್ಮಾಣ ವಿರೋಧಿಸಿ ನಡಿಗೆದಾರರ ಸಂಘದಿಂದ ಪ್ರತಿಭಟನೆ 
ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ನಡಿಗೆದಾರರ ಸಂಘದಿಂದ ಪ್ರತಿಭಟನೆ

ಕಬ್ಬನ್ ಪಾರ್ಕ್ ಆವರಣದಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ (ನಡಿಗೆದಾರರ ಸಂಘ) ಮೂರನೇ ಬಾರಿಗೆ ಪ್ರತಿಭಟನೆ ನಡೆಸಿತು.

ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ (ನಡಿಗೆದಾರರ ಸಂಘ) ಮೂರನೇ ಬಾರಿಗೆ ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಹಸಿರು ಪ್ರದೇಶವಾದ ಕಬ್ಬನ್ ಪಾರ್ಕ್‌ನಲ್ಲಿ ಹೈಕೋರ್ಟ್ ಕಟ್ಟಡ ನಿರ್ಮಿಸುವ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಸಾರ್ವಜನಿಕರಿಂದ ಮತ್ತು ವಿಪಕ್ಷ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಗಮನಾರ್ಹ ವಿರೋಧವನ್ನು ಎದುರಿಸುತ್ತಿದೆ.

ಲೋಕೋಪಯೋಗಿ ಇಲಾಖೆ (PWD) ಇತ್ತೀಚೆಗೆ ಉದ್ಯಾನದೊಳಗೆ ಹೈಕೋರ್ಟ್ ಕಟ್ಟಡ ನಿರ್ಮಿಸುವ ಹಿಂದಿನ ಯೋಜನೆಯನ್ನು ಮತ್ತೆ ಕಾರ್ಯರೂಪಕ್ಕೆ ತಂದಿದ್ದು, ಕಬ್ಬನ್ ಪಾರ್ಕ್‌ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿ ವಿರೋಧಿಸಿ ನಡಿಗೆದಾರರ ಸಂಘ ಸರಣಿ ಪ್ರತಿಭಟನೆ ನಡೆಸಿದೆ. ಇಂದು ನಡೆದ ಪ್ರತಿಭಟನೆ ಮೂರನೇ ಪ್ರತಿಭಟನೆಯಾಗಿದೆ.

ಇತ್ತೀಚೆಗಷ್ಟೇ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಹೈಕೋರ್ಟ್ ಕಟ್ಟಡ ನಿರ್ಮಾಣದ ನಿರ್ಧಾರವನ್ನು ಅಧಿಕೃತವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮೌನ ಪ್ರತಿಭಟನೆ ನಡೆಸಿದ್ದರು. ರಾಜ್ಯ ಕೇಂದ್ರ ಗ್ರಂಥಾಲಯದ ಅವರಣದಲ್ಲಿ ಭಿತ್ತಿ ಫಲಕಗಳನ್ನು ಹಿಡಿದು ಜಮಾಯಿಸಿದ್ದರು. ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್ .ಉಮೇಶ್ ಕುಮಾರ್ , ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಈಗಾಗಲೇ ನಗರಕ್ಕೆ ಹೊರೆಯಾಗಿರುವ ಉದ್ಯಾನದ ಜಾಗ ಅತಿಕ್ರಮಣ ಹಾಗೂ ಸಂಚಾರ ದಟ್ಟಣೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಅದೇ ರೀತಿ ನೂರಾರು ಬೆಂಗಳೂರಿಗರು ಉದ್ಯಾನವನದಲ್ಲಿ ಜಮಾಯಿಸಿ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಅಸಮ್ಮತಿ ವ್ಯಕ್ತಪಡಿಸಿದರು. ಉದ್ಯಾನವನದೊಳಗೆ 10 ಅಂತಸ್ತಿನ ಕಟ್ಟಡವನ್ನು ನಿರ್ಮಿಸುವುದರಿಂದ ಅದರ ಹಸಿರು ಕಡಿಮೆಯಾಗುವುದಲ್ಲದೆ ಹಸಿರನ್ನು ನಂಬಿ ಇರುವ ಜೀವ ಸಂಕುಲಕ್ಕೆ ಭಂಗ ಉಂಟಾಗುತ್ತದೆ ಎಂದು ಪ್ರತಿಭಟನಾಕಾರರು ವಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT