ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ 
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಬಿಎಂಟಿಸಿ ಬಸ್‌ನಲ್ಲಿ ಶಂಕಿತ ಪಯಣ, ಸಿಸಿಟಿವಿ ದೃಶ್ಯ ಪರಿಶೀಲನೆ

30 ರಿಂದ 35 ವರ್ಷದೊಳಗಿನ ಶಂಕಿತ ಎಂದು ಅಂದಾಜು

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ 30 ರಿಂದ 35 ವರ್ಷದೊಳಗಿನ ಶಂಕಿತ ಎಂದು ಅಂದಾಜುಪಟ್ಟಿದ್ದಾರೆ.

ಪ್ರಕರಣವನ್ನು ಎಸಿಪಿ ನವೀನ್ ಕುಲಕರ್ಣಿ ನೇತೃತ್ವದಲ್ಲಿ ಕೇಂದ್ರ ಅಪರಾಧ ವಿಭಾಗದ (CCB) ತನಿಖೆಗೆ ಹಸ್ತಾಂತರಿಸಲಾಗಿದೆ.

ದೃಶ್ಯಗಳಲ್ಲಿ, ಆರೋಪಿತ ಬಾಂಬರ್ ಶರ್ಟ್, ಕಪ್ಪು ಪ್ಯಾಂಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿರುವುದು ಕಂಡುಬಂದಿದೆ. ಬಲಗೈಯಲ್ಲಿ ಕಪ್ಪು ಬ್ಯಾಗ್ ಧರಿಸಿದ್ದು, ಎಡಗೈಯಲ್ಲಿ ಸೆಲ್ ಫೋನ್ ಹಿಡಿದುಕೊಂಡು ಶಂಕಿತ ಆರೋಪಿ ಬೆಳಿಗ್ಗೆ 11.34 ಕ್ಕೆ ಕೆಫೆಗೆ ಪ್ರವೇಶಿಸಿ 11.50 ಕ್ಕೆ ಹೊರಟುಹೋಗಿದ್ದಾನೆ.

ಶಂಕಿತ ಆರೋಪಿ ಬಿಎಂಟಿಸಿ ವೋಲ್ವೋ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ. ಆರೋಪಿಗಳ ಪ್ರಯಾಣದ ಬಗ್ಗೆ ಪರಿಶೀಲಿಸಲು ಪೊಲೀಸರು ಬಿಎಂಟಿಸಿ ಒದಗಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಶಂಕಿತ ಉಗ್ರರು ಬಾಂಬ್ ಹೊತ್ತೊಯ್ದ ಬ್ಯಾಗ್ ಹಿಡಿದು ರೆಸ್ಟೋರೆಂಟ್‌ಗೆ ತೆರಳಿದ್ದು ಬಿಎಂಟಿಸಿ ಬಸ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಂಕಿತ ವ್ಯಕ್ತಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ ಎಂದು ಖಚಿತಪಡಿಸಿದ್ದಾರೆ.

ಶಂಕಿತ ವ್ಯಕ್ತಿಯು ಕೆಫೆಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕೋರಿದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ನಾವು ಹಂಚಿಕೊಂಡಿದ್ದೇವೆ. ಪೊಲೀಸರು ತನಿಖೆ ನಡೆಸಬೇಕಾಗಿದ್ದು, ಪೊಲೀಸರು ಕೇಳಿದ ವಿವರಗಳನ್ನು ನೀಡುವ ಮೂಲಕ ಪೊಲೀಸರಿಗೆ ಬೆಂಬಲ ನೀಡುವುದು ನಮ್ಮ ಕೆಲಸವಾಗಿದೆ. ಅವರ ವಿಚಾರಣೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದರು.

ಶಂಕಿತ ವ್ಯಕ್ತಿ ಪ್ರಯಾಣಿಸಿದ ಬಸ್ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಕಾಡುಗೋಡಿ ನಡುವೆ ಸಿಎಮ್‌ಆರ್‌ಐಟಿ ಕಾಲೇಜು, ಕುಂದಲಹಳ್ಳಿ ಕಾಲೋನಿ, ಐಟಿಪಿಎಲ್ ಬಸ್ ನಿಲ್ದಾಣಗಳು ಒಳಗೊಂಡ ಮಾರ್ಗ ಸಂಖ್ಯೆ ‘500 ಎಫ್’ ಎಂದು ಹೇಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಬಾಂಬ್ ಇಟ್ಟು ವಾಪಸ್ ಪ್ರಯಾಣಿಸಿದ್ದಾರೆ ಎನ್ನಲಾಗಿದ್ದು, ಬಿಎಂಟಿಸಿ ಹಂಚಿಕೊಂಡಿರುವ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT