ಮೂವರು ಯುವಕರು ಸಮುದ್ರ ಪಾಲು.! 
ರಾಜ್ಯ

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ.

ಮಿಲನ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್‌ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್‌ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್‌ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT