ಮೂವರು ಯುವಕರು ಸಮುದ್ರ ಪಾಲು.! 
ರಾಜ್ಯ

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ.

ಮಿಲನ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್‌ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್‌ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್‌ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!

ಮೊದಲ ಬಾರಿ ಬುಕ್‌ಮೈಶೋನಲ್ಲಿ ಮೋದಿ ಕಾರ್ಯಕ್ರಮಕ್ಕೆ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ! ವೇಟಿಂಗ್ ಎಷ್ಟು ಗೊತ್ತಾ?