ಪ್ರತಾಪ್ ಸಿಂಹ 
ರಾಜ್ಯ

ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಕೇವಲ ಟ್ರೇಲರ್ ಅಷ್ಟೆ, ಇನ್ನೂ ಗಂಡಾಂತರ ಕಾದಿದೆ: ಪ್ರತಾಪ ಸಿಂಹ

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರೆದರೆ ವಿಧಾನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಮೈಸೂರು: ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರೆದರೆ ವಿಧಾನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ. ನೀವು ಕಾಂಗ್ರೆಸ್‌ಗೆ ಓಟ್ ಹಾಕಿದ್ರೆ, ತಾಲಿಬಾನಿ ಸರ್ಕಾರ ಬರುತ್ತೆ ಎಂದಿದ್ದೆ. ಇವತ್ತು ತಾಲಿಬಾನಿ ಸರ್ಕಾರ ನಡೀತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿ ಆಗಿದೆ. ವಿಧಾನಸೌಧದ ಒಳಗೆ ಪಾಕಿಸ್ತಾನ್‌ ಜಿಂದಾಬಾದ್ ಘೋಷಣೆ ಮೊಳಗಿದೆ ಅಂದ್ರೆ ಯಾರು ಅಧಿಕಾರ ಮಾಡ್ತಿದ್ದಾರೆ ಅನ್ನೋದು ಸ್ಪಷ್ಟ ಆಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರೆದರೆ ವಿಧಾನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ ಎಂದ ಪ್ರತಾಪ್ ಸಿಂಹ, ಬಾಂಬ್ ಬ್ಲಾಸ್ಟ್‌ಗಳು ಶುರುವಾಗಿದ್ದೇ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ. ಹತ್ತು ವರ್ಷಗಳ ಕಾಲ ಸರಣಿ ಬಾಂಬ್ ಬ್ಲಾಸ್ಟ್‌ಗಳು ದೇಶದಲ್ಲಿ ನಡೆದಿದ್ದವು. ಚಿನ್ನಸ್ವಾಮಿ ಸ್ಟೇಡಿಂ, ಲಿಂಬಿಣಿ ಗಾರ್ಡನ್, ಜರ್ಮನ್ ಬೇಕರಿ, ಪೂಣೆ, ಮುಂಬೈ, ಡೆಲ್ಲಿ,ಸೂರತ್ ಹೀಗೆ ದೇಶಾದ್ಯಂತ ಸರಣಿ ಬಾಂಬ್ ಬ್ಲಾಸ್ಟ್‌ಗಳು ನಡೆಯುತ್ತಿದ್ದವು ಎಂದು ಹೇಳಿದರು.

ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಹಾಗಾಗಿ ಬಾಂಬ್ ಬ್ಲಾಸ್ಟ್‌ಗಳು ಪ್ರಾರಂಭವಾಗಿದೆ ಎಂದ ಪ್ರತಾಪ್ ಸಿಂಹ, ಇದು ಟ್ರೈಲರ್ ಮಾತ್ರ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ ಎಂದ ಅವರು, ಆದಷ್ಟು ಬೇಗ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಜೆಡಿಎಸ್ ಮೈತ್ರಿಕೂಟಕ್ಕೆ ಕೊಟ್ಟು ಗೆಲ್ಲಿಸಿ ಕೊಡಿ. ಆ ಮೂಲಕ ಈ ಸರ್ಕಾರ ತೊಲಗಲು ಅವಕಾಶ ಮಾಡಿಕೊಟ್ರೆ ಕರ್ನಾಟಕ ಉಳಿಯುತ್ತೆ, ಇಲ್ಲದಿದ್ರೆ ಗಂಡಾಂತರ ಕಾದಿದೆ‌ ಎಂದು ಎಚ್ಚರಿಕೆ ನೀಡಿದರು.

ಇನ್ನು, ಒಸಾಮಾಬಿನ್, ಮುಲ್ಲಾ ಉಮರ್‌ಜಾ ಅಂತಹವರು ಅಧಿಕಾರ ಮಾಡುವಾಗ ಬಾಂಬ್ ಹಾಕುವವರಿಗೆ ರಕ್ಷಣೆ ಕೊಡುತ್ತಾರೆ, ಹಿಡಿಯೋ ಕೆಲಸ ಮಾಡಲ್ಲ ಎಂದ ಪ್ರತಾಪ್ ಸಿಂಹ, ಇಷ್ಟೆಲ್ಲ ಆದ್ರೂ ಎಫ‌ಎಸ್‌ಎಲ್ ರಿಪೋರ್ಟ್ ಸೋಷಿಯಲ್ ಮೀಡಿಯಾದಲ್ಲಿ ತಿರುಚಿದ್ದಾರೆ ಅಂತ ಸಮರ್ಥಿಸಿಕೊಳ್ಳುವ ಅಗತ್ಯ ಏನಿದೆ‌? ಸಿದ್ದರಾಮಯ್ಯ ಅವರೇ ನೀವು ಅವರ ಕೈ ಕಡಿದರೂ ಅವರು ನಿಮಗೆ ಮತ ಹಾಕೋದು. ಮತ್ಯಾಕೆ ನೀವು ರಕ್ಷಣೆ ಮಾಡಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

Thinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!

ನೀರಲ್ಲ, ವಿಷ ಸರಬರಾಜು ಮಾಡಲಾಗಿದೆ: ಇಂದೋರ್ ದುರಂತಕ್ಕೆ ರಾಹುಲ್ ಗಾಂಧಿ ಕಿಡಿ

Ballari clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ: ಶ್ರೀರಾಮುಲು ಗಂಭೀರ ಆರೋಪ

SCROLL FOR NEXT